ದೇಶವಿರೋಧಿ ಹಾಗು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲಿ ಯಾವುದೇ ತನಿಖೆ ವಿಚಾರಣೆ ಮಾಡುವ ಅಗತ್ಯ ಇಲ್ಲದೆ ನೇರವಾಗಿ ಅವರನ್ನು ಎನ್ಕೌಂಟರ್ ಮಾಡಿ : ಕಾರ್ಕಳ ಶಾಸಕ ಸುನಿಲ್ ಕುಮಾರ್ -Vishwanews24

ಕಾರ್ಕಳ: ದೇಶವಿರೋಧಿ ಹಾಗು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲಿ ಯಾವುದೇ ತನಿಖೆ ವಿಚಾರಣೆ ಮಾಡುವ ಅಗತ್ಯ ಇಲ್ಲದೆ ನೇರವಾಗಿ ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಆಡಳಿತ ಪಕ್ಷದ ಸಚೇತಕ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಅವರು ಶುಕ್ರವಾರ ಕಾರ್ಕಳ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿ ಬೆಳೆದು ಇಲ್ಲಿಯ ಗಾಳಿ ನೀರು ಆಹಾರ ಜೊತೆಗೆ ಎಲ್ಲಾ ಸೌಲಭ್ಯ ಪಡೆದು ಪಾಕಿಸ್ತಾನದ ಪರ ಘೋಷಣೆ ಮಾಡುವವರಿಗೆ ಎನ್ಕೌಂಟರ್ ಮಾಡುವ ಮೂಲಕ ದೇಶ ವಿರೋಧಿಗಳಿಗೆ ಉತ್ತರ ನೀಡಬೇಕಾಗಿದೆ.

ಇಂದು ದೇಶವಿರೋಧಿ ಕೆಲಸ ಮಾಡಿದ ಯುವತಿಯ ಮನೆ ಕಾರ್ಕಳದಿಂದ 70 ಕಿಲೋಮೀಟರ್ ದೂರದಲ್ಲಿದೆ ನಕ್ಸಲ್ ಚಟುವಟಿಕೆಗಳಿಗೆ ಶೃಂಗೇರಿ ಕೊಪ್ಪ ಕೇಂದ್ರಸ್ಥಾನವಾಗಿತ್ತು ಎಡಪಂಥೀಯ ಚಟುವಟಿಕೆ ಮತ್ತೆ ಜೀವ ತುಂಬುವ ಮೂಲಕ ಶೃಂಗೇರಿ ಕೊಪ್ಪ ಮೂಲದ ಯುವತಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಮಂಗಳೂರುಗಳಲ್ಲಿ ಕೇರಳ ರಾಜ್ಯದಿಂದ ಬಂದು ಗಲಾಟೆ ಮಾಡುತ್ತಾರೆ ದೇಶದ ಒಳಗೆ ಅಭದ್ರತೆ ನಿರ್ಮಾಣ ಮಾಡಿ ಈ ರೀತಿ ಸಮಾಜದ್ರೋಹಿ ದೇಶದ್ರೋಹಿ ಘೋಷಣೆ ಕೂಗುವವರು ಹಾಗೂ ಅವರ ಹಿಂದೆ ಅಡಗಿರುವ ಕಾಣದ ಶಕ್ತಿಗಳ ನಿಜ ಮುಖವಾಡ ಬಯಲಾಗಬೇಕಾಗಿದೆ ಎಂದರು ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರ ಮೇಲೂ ಪ್ರಕರಣವನ್ನು ದಾಖಲಿಸುವಂತೆ ಗೃಹ ಇಲಾಖೆಯನ್ನು ಸುನೀಲ್ ಕುಮಾರ್ ಆಗ್ರಹಿಸಿದರು.

ಸಿಎಎ ಕಾಯ್ದೆ ವಿಚಾರದಲ್ಲಿ ಮುಸಲ್ಮಾನರಿಗೆ ತೊಂದರೆ ಇಲ್ಲವೆಂದು ಪದೇಪದೇ ಹೇಳುತ್ತಿದ್ದರು ಮುಸ್ಲಿಮರು ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಅಗತ್ಯತೆ ಏನೀತ್ತು. ಸಿಎಎ ಪ್ರತಿಭಟನೆ ಹಿಂದಿದ್ದ ಮುಖವಾಡಗಳು ಯಾವುದು ಮನಸ್ಸಿಲ್ಲದ ಮನಸ್ಸಿಂದ ರಾಷ್ಟ್ರಧ್ವಜ ಹಿಡಿದು ಮನದಲ್ಲಿ ಪಾಕಿಸ್ತಾನ ಜಪ ಮಾಡುವ ಮೂಲಕ ಇಂದು ಸಿಎಂ ವಿರುದ್ಧ ಪ್ರತಿಭಟನಾಕಾರರ ನಿಜವಾದ ಬಣ್ಣ ಬಯಲಾಗಿದೆ ಎಂದರು

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

9 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

19 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

19 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

19 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago