ದೇಶವಿರೋಧಿ ಹಾಗು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲಿ ಯಾವುದೇ ತನಿಖೆ ವಿಚಾರಣೆ ಮಾಡುವ ಅಗತ್ಯ ಇಲ್ಲದೆ ನೇರವಾಗಿ ಅವರನ್ನು ಎನ್ಕೌಂಟರ್ ಮಾಡಿ : ಕಾರ್ಕಳ ಶಾಸಕ ಸುನಿಲ್ ಕುಮಾರ್ -Vishwanews24

ಕಾರ್ಕಳ: ದೇಶವಿರೋಧಿ ಹಾಗು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲಿ ಯಾವುದೇ ತನಿಖೆ ವಿಚಾರಣೆ ಮಾಡುವ ಅಗತ್ಯ ಇಲ್ಲದೆ ನೇರವಾಗಿ ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಆಡಳಿತ ಪಕ್ಷದ ಸಚೇತಕ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಅವರು ಶುಕ್ರವಾರ ಕಾರ್ಕಳ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿ ಬೆಳೆದು ಇಲ್ಲಿಯ ಗಾಳಿ ನೀರು ಆಹಾರ ಜೊತೆಗೆ ಎಲ್ಲಾ ಸೌಲಭ್ಯ ಪಡೆದು ಪಾಕಿಸ್ತಾನದ ಪರ ಘೋಷಣೆ ಮಾಡುವವರಿಗೆ ಎನ್ಕೌಂಟರ್ ಮಾಡುವ ಮೂಲಕ ದೇಶ ವಿರೋಧಿಗಳಿಗೆ ಉತ್ತರ ನೀಡಬೇಕಾಗಿದೆ.

ಇಂದು ದೇಶವಿರೋಧಿ ಕೆಲಸ ಮಾಡಿದ ಯುವತಿಯ ಮನೆ ಕಾರ್ಕಳದಿಂದ 70 ಕಿಲೋಮೀಟರ್ ದೂರದಲ್ಲಿದೆ ನಕ್ಸಲ್ ಚಟುವಟಿಕೆಗಳಿಗೆ ಶೃಂಗೇರಿ ಕೊಪ್ಪ ಕೇಂದ್ರಸ್ಥಾನವಾಗಿತ್ತು ಎಡಪಂಥೀಯ ಚಟುವಟಿಕೆ ಮತ್ತೆ ಜೀವ ತುಂಬುವ ಮೂಲಕ ಶೃಂಗೇರಿ ಕೊಪ್ಪ ಮೂಲದ ಯುವತಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಮಂಗಳೂರುಗಳಲ್ಲಿ ಕೇರಳ ರಾಜ್ಯದಿಂದ ಬಂದು ಗಲಾಟೆ ಮಾಡುತ್ತಾರೆ ದೇಶದ ಒಳಗೆ ಅಭದ್ರತೆ ನಿರ್ಮಾಣ ಮಾಡಿ ಈ ರೀತಿ ಸಮಾಜದ್ರೋಹಿ ದೇಶದ್ರೋಹಿ ಘೋಷಣೆ ಕೂಗುವವರು ಹಾಗೂ ಅವರ ಹಿಂದೆ ಅಡಗಿರುವ ಕಾಣದ ಶಕ್ತಿಗಳ ನಿಜ ಮುಖವಾಡ ಬಯಲಾಗಬೇಕಾಗಿದೆ ಎಂದರು ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರ ಮೇಲೂ ಪ್ರಕರಣವನ್ನು ದಾಖಲಿಸುವಂತೆ ಗೃಹ ಇಲಾಖೆಯನ್ನು ಸುನೀಲ್ ಕುಮಾರ್ ಆಗ್ರಹಿಸಿದರು.

ಸಿಎಎ ಕಾಯ್ದೆ ವಿಚಾರದಲ್ಲಿ ಮುಸಲ್ಮಾನರಿಗೆ ತೊಂದರೆ ಇಲ್ಲವೆಂದು ಪದೇಪದೇ ಹೇಳುತ್ತಿದ್ದರು ಮುಸ್ಲಿಮರು ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಅಗತ್ಯತೆ ಏನೀತ್ತು. ಸಿಎಎ ಪ್ರತಿಭಟನೆ ಹಿಂದಿದ್ದ ಮುಖವಾಡಗಳು ಯಾವುದು ಮನಸ್ಸಿಲ್ಲದ ಮನಸ್ಸಿಂದ ರಾಷ್ಟ್ರಧ್ವಜ ಹಿಡಿದು ಮನದಲ್ಲಿ ಪಾಕಿಸ್ತಾನ ಜಪ ಮಾಡುವ ಮೂಲಕ ಇಂದು ಸಿಎಂ ವಿರುದ್ಧ ಪ್ರತಿಭಟನಾಕಾರರ ನಿಜವಾದ ಬಣ್ಣ ಬಯಲಾಗಿದೆ ಎಂದರು

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago