Featured

ದೇಶವು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ; ಅದಕ್ಕೆ, ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರಜೆಗಳಿಗೆ ಜಾಗೃತಿಗೊಳಿಸಿ ಅವರ ಉಳಿವಿಗೆ ಶ್ರಮಿಸುತ್ತಿದ್ದೇನೆ : ಸಸಿಕಾಂತ ಸೆಂಥಿಲ್ -Vishwanews24

ರಾಯಚೂರು: ‘ದೇಶದಲ್ಲಿ ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸಹೋದರರಂತೆ ಇದ್ದವರನ್ನು ಕಲಹಕ್ಕೆ ಪ್ರಚೋದಿಸುತ್ತಿದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿದ್ದ ಸ್ಥಿತಿ ಮತ್ತೆ ಹತ್ತಿರ ಬರುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಅಧಿಕಾರಿ ಸಸಿಕಾಂತ ಸೆಂಥಿಲ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮ–ಧರ್ಮಗಳ ಜಗಳ ಹಚ್ಚುವ ಕೆಲಸಕ್ಕೆ ಕೇಂದ್ರ ಮುಂದಾಗಿದೆ. ಸಂವಿಧಾನದ ನೀತಿ ನಿಯಮಗಳನ್ನು ಹಾಳು ಮಾಡಿದೆ. ದೇಶವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿನ್ನೆಡೆ ಅನುಭವಿಸುವಂತೆ ಮಾಡಿದೆ’ ಎಂದು ದೂರಿದರು.

ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಪೂರಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಣ ಸುಧಾರಣೆಗೆ ಮೊದಲು ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ, ಶಿಕ್ಷಣ, ಆರೋಗ್ಯದ ಕಡೆ ಗಮನ ಹರಿಸಿ, ಅದಕ್ಕೆ ಹೆಚ್ಚಿನ ಬಜೆಟ್ ಮೀಸಲಿಡುವಂತೆ ತಿಳಿಸಿದರು.

ದೆಹಲಿಯ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ ಅದನ್ನು ಆಡಳಿತದಲ್ಲಿರುವ ಸರ್ಕಾರ ಕಿತ್ತುಕೊಂಡಿದೆ. ಒತ್ತಾಯ ಪೂರ್ವಕ ತಮ್ಮದೇ ಆದ ಸೈದ್ಧಾಂತಿಕ ನಿಲುವುಗಳನ್ನು ಜಾರಿಗೊಳಿಸುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವಿಧಿಸಿ ದೇಶದಲ್ಲಿ ಕೈಗಾರಿಕ ಕಂಪನಿಗಳು ನಷ್ಟ ಅನುಭವಿಸುವಂತೆ ಮಾಡಿದೆ. ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಖಾಸಗಿಕರಣ ಮಾಡಲು ಹೋರಟಿದ್ದಾರೆ ಇದು ಸರಿಯಾದ ನಿರ್ಧಾರ ಅಲ್ಲ ಎಂದರು.

ದೇಶವು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ; ಅದಕ್ಕೆ, ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಅಧಿಕಾರದಿಂದ ಹೊರಬಂದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಟೀಕಿಸುತ್ತಿದ್ದೇನೆ. ಪ್ರಜೆಗಳಿಗೆ ಜಾಗೃತಿಗೊಳಿಸಿ ಅವರ ಉಳಿವಿಗೆ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.

 

 

Vishwa News 24

Recent Posts

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

16 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

32 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

46 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

56 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

1 hour ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

1 hour ago