Featured

ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ -Vishwanews24

ನವದೆಹಲಿ: ಭಾರತೀಯ ಯೋಧರು ತಮ್ಮ ಪ್ರಾಣವನ್ನೇ ಪಣಕಿಟ್ಟು, ಶೌರ್ಯ, ತ್ಯಾಗ ಬಲಿದಾನದವನ್ನು ನೆನಪಿಸಿ ನಮನ ಸಲ್ಲಿಸುವ ಗೌರವ ದಿನವಾಗಿದ್ದು, ದೇಶದಾದ್ಯಂತ ಇಂದು 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸುತ್ತಿದೆ.

ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು `ವಿಕ್ಟರ್ ಫ್ಲೇಮ್’ ಅನ್ನು ಬೆಳಗಿಸಿದ್ದರು. ಈ ಜ್ಯೋತಿ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿದೆ. ಸುಮಾರು 25 ದಿನಗಳ ಕಾಲ ನಡೆದಿದ್ದ ಯುದ್ಧದಲ್ಲಿ ಪಾಕ್ ಸೇನಾಪಡೆ ಹಾಗೂ ಉಗ್ರವಾದಿಗಳನ್ನು ನಮ್ಮ ಸಿಪಾಯಿಗಳು ಹಿಮ್ಮೆಟ್ಟಿಸಿದ್ದರು. ಇದಕ್ಕೆ ಆಪರೇಷನ್ ವಿಜಯ್ ಅಂತ ಹೆಸರಿಡಲಾಗಿತ್ತು.

ಇತಿಹಾಸದಲ್ಲಿ 1999 ರ ಜುಲೈ 26 ಎಂಬುವುದು ಮಹತ್ವದ ದಿನವಾಗಿದೆ. ಭಾರತದ ಗಡಿಭಾಗದಲ್ಲಿ ಕಾರ್ಗಿಲ್, ದಾಸ್ ತೊಲೊಲಿಂಗ್, ಬಟಾಲಿಕ್, ಟರ್ಟೋಕ್ ವಲಯಗಳಲ್ಲಿ ಅಕ್ರಮವಾಗಿ ದೇಶದೊಳಗೆ ನುಸುಳಿದ ಪಾಕಿಸ್ತಾನಿ ಸೈನ್ಯಪಡೆಯನ್ನು ಸದೆಬಡಿಯುವ ಮೂಲಕ ಕಾರ್ಗಿಲ್ ಬೆಟ್ಟಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ.

ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

18 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

19 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

19 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

20 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

20 hours ago