ನವದೆಹಲಿ: ಭಾರತೀಯ ಯೋಧರು ತಮ್ಮ ಪ್ರಾಣವನ್ನೇ ಪಣಕಿಟ್ಟು, ಶೌರ್ಯ, ತ್ಯಾಗ ಬಲಿದಾನದವನ್ನು ನೆನಪಿಸಿ ನಮನ ಸಲ್ಲಿಸುವ ಗೌರವ ದಿನವಾಗಿದ್ದು, ದೇಶದಾದ್ಯಂತ ಇಂದು 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸುತ್ತಿದೆ.
ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು `ವಿಕ್ಟರ್ ಫ್ಲೇಮ್’ ಅನ್ನು ಬೆಳಗಿಸಿದ್ದರು. ಈ ಜ್ಯೋತಿ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿದೆ. ಸುಮಾರು 25 ದಿನಗಳ ಕಾಲ ನಡೆದಿದ್ದ ಯುದ್ಧದಲ್ಲಿ ಪಾಕ್ ಸೇನಾಪಡೆ ಹಾಗೂ ಉಗ್ರವಾದಿಗಳನ್ನು ನಮ್ಮ ಸಿಪಾಯಿಗಳು ಹಿಮ್ಮೆಟ್ಟಿಸಿದ್ದರು. ಇದಕ್ಕೆ ಆಪರೇಷನ್ ವಿಜಯ್ ಅಂತ ಹೆಸರಿಡಲಾಗಿತ್ತು.
ಇತಿಹಾಸದಲ್ಲಿ 1999 ರ ಜುಲೈ 26 ಎಂಬುವುದು ಮಹತ್ವದ ದಿನವಾಗಿದೆ. ಭಾರತದ ಗಡಿಭಾಗದಲ್ಲಿ ಕಾರ್ಗಿಲ್, ದಾಸ್ ತೊಲೊಲಿಂಗ್, ಬಟಾಲಿಕ್, ಟರ್ಟೋಕ್ ವಲಯಗಳಲ್ಲಿ ಅಕ್ರಮವಾಗಿ ದೇಶದೊಳಗೆ ನುಸುಳಿದ ಪಾಕಿಸ್ತಾನಿ ಸೈನ್ಯಪಡೆಯನ್ನು ಸದೆಬಡಿಯುವ ಮೂಲಕ ಕಾರ್ಗಿಲ್ ಬೆಟ್ಟಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ.
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…