ಬೆಂಗಳೂರು: ಇಂದಿನ ಯುವಕರು ನಾಳಿನ ನಾಯಕರಾಗುವುದು ಪ್ರದಾನಿ ಮೋದಿಗೆ ಇಷ್ಟವಿಲ್ಲ, ಇಂದಿನ ಯುವಕರು ಇಂದೇ ನಾಯಕರಾಗಬೇಕು ಎಂಬುದು ಮೋದಿ ಅಭಿಲಾಷೆಯಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪಕ್ಷದ ಸಂಘಟನೆಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ತೇಜಸ್ವಿ, ನಾನು ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಿಂದ ಈ ಹುದ್ದೆ ಅಲಂಕರಿಸಿದ್ದು, ಇದು ಎಲ್ಲಾ ಕನ್ನಡಿಗರ ಮತ್ತು ನನ್ನ ಕ್ಷೇತ್ರದ ಜನರ ಆಶೀರ್ವಾದ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಹಿಂದೆ ರಾಜಕೀಯ ಹಿನ್ನೆಲೆ ಇಲ್ಲದ ಜನರಿಗೆ ಅವಕಾಶ ನೀಡಿದರೆ, ಕೆಲವು ಪಕ್ಷಗಳು ವಂಶವಾಹಿಯಾಗಿ ಅಧಿಕಾರ ನೀಡುತ್ತಿದ್ದವು ಎಂದು ಹೇಳಿದ್ದಾರೆ.
ದೇಶಾದ್ಯಂತ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ನನ್ನ ಪ್ರಮುಖ ಧ್ಯೇಯವಾಗಿದೆ. ಅತ್ಯಂತ ಸಾಧಾರಣ ಮತ್ತು ಸಾಮಾನ್ಯ ಹಿನ್ನೆಲೆ, ಬಡ ಮತ್ತು ದುರ್ಬಲ ವಿಭಾಗಗಳಿಂದ ಬಂದವರನ್ನು ಗುರುತಿಸಿ, ದೇಶಾದ್ಯಂತ ನಾಯಕತ್ವದ ಸ್ಥಾನಗಳನ್ನು ಪಡೆಯಲು ಮತ್ತು ಸಂಘಟನೆಗೆ ಶಕ್ತಿ ನೀಡಲು ಅವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ಬಿಜೆಪಿ ನಗಣ್ಯ ಹೆಜ್ಜೆಗುರುತನ್ನು ಹೊಂದಿದೆ, ಇಂದು ಯುವ ನಾಯಕರಿಗೆ ಪ್ರಮುಖ ಸವಾಲಾಗಿದೆ. ಏಕೆಂದರೇ ನಾವು ಕಿರಿಯರು, ಆದರೆ ಪಕ್ಷ ವೇಗವಾಗಿ ಬೆಳೆಯುತ್ತಿದೆ ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…