Featured

ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ : ಬ್ಯಾಂಕಿಂಗ್‌ ಸೇವೆಗಳ ಮೇಲೆ ಕೂಡ ಪರಿಣಾಮ – vishwanews24

ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ : ಬ್ಯಾಂಕಿಂಗ್‌ ಸೇವೆಗಳ ಮೇಲೆ ಕೂಡ ಪರಿಣಾಮ

ನವದೆಹಲಿ: ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗೂಗಲ್‌ಪೇ, ಫೋನ್‌ಪೇ , ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಬೇರೆಯವರಿಗೆ ಹಣ ಕಳುಹಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಯಾವ ಕಾರಣಕ್ಕೆ ಈ ಸಮಸ್ಯೆ ಎದುರಾಗಿದೆ ಎನ್ನುವುದು ತಿಳಿದು ಬಂದಿಲ್ಲ.

ಶನಿವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ, ಡೌನ್‌ಡೆಕ್ಟರ್‌ ಕೂಡ ಇದನ್ನು ವರದಿ ಮಾಡಿದೆ. ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದ ಗ್ರಾಹಕರು 5 ನಿಮಿಷವಾದ್ರೂ ಪೂರ್ಣಗೊಳ್ಳದೇ ಇರುವುದು ಕಂಡುಬಂದಾಗ ಸಮಸ್ಯೆಯಾಗಿರುವುದು ಗೊತ್ತಾಗಿದೆ. ಬಳಿಕ ಬಹಳಷ್ಟು ಮಂದಿ ತಮ್ಮ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಹಾಕಿದ್ದಾರೆ. #upidown ಎನ್ನುವ ಹ್ಯಾಶ್‌ಟ್ಯಾಗ್‌ನೊಂದಿಗೆ ಎಕ್ಸ್‌ ಖಾತೆಯಲ್ಲಿ ಸ್ಕ್ರೀನ್‌ಶಾಟ್‌ ಅನ್ನು ಪೋಸ್ಟ್‌ ಮಾಡಿದ್ದಾರೆ. ಇದು ಸಮಸ್ಯೆಯಾದ ಕೆಲವೇ ನಿಮಿಷಗಳಲ್ಲಿ ಟ್ರೆಂಡಿಂಗ್‌ ಆಗಿದೆ.

ಎಸ್‌ಬಿಐ , ಗೂಗಲ್‌ ಪೇ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕಿಂಗ್‌ನ UPI ಸೇವೆಗಳ ಮೇಲೂ ಪರಿಣಾಮ ಬೀರಿದೆ ಎಂದು ಡೌನ್‌ಡೆಕ್ಟರ್ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದೆ.

ಇನ್ನೂ ಇದಕ್ಕೆ ಪ್ರತಿಕ್ರಿಯಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ, ಮಧ್ಯಂತರ ತಾಂತ್ರಿಕ ಸಮಸ್ಯೆಗಳಿಂದ ಯುಪಿಐ ವಹಿವಾಟಿನಲ್ಲಿ ಸಮಸ್ಯೆಯಾಗಿದೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago