ನವದೆಹಲಿ: ಪ್ರಧಾನಿ ಮೋದಿ ಅವರ “ಮೈ ಭಿ ಚೌಕಿದಾರ್’ ಕರೆ ದೇಶಾದ್ಯಂತ ಹವಾ ಎಬ್ಬಿಸಿದೆ. ಶನಿವಾರವಷ್ಟೇ ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಪ್ರಧಾನಿ, ಎಲ್ಲರೂ “ನಾನೂ ಚೌಕಿದಾರ’ ಎಂದು ಘೋಷಿಸುವಂತೆ ಕರೆ ನೀಡಿದ್ದರು. ಇದಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಈ ಲೋಕಸಭೆ ಚುನಾವಣೆಗೆ “ಚೌಕಿದಾರ್’ ಟ್ಯಾಗ್ ಅನ್ನು ಬಳಸಿಕೊಂಡು ಮತ ಬೇಟೆಗೆ ಬಿಜೆಪಿ ಮುಂದಾಗಿದೆ.
ಭಾನುವಾರ ಪ್ರಧಾನಿ ತಮ್ಮ ಟ್ವಿಟರ್ ಖಾತೆಯ ಹೆಸರನ್ನು “ಚೌಕಿದಾರ್ ನರೇಂದ್ರ ಮೋದಿ’ ಎಂದು ಬದಲಿಸಿಕೊಂಡಿದ್ದಾರೆ. ಬೆನ್ನಲ್ಲೇ ಬಿಜೆಪಿಯ ಉಳಿದ ನಾಯಕರೂ ಅವರನ್ನೇ ಅನುಸರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ಟ್ವಿಟರ್ ಖಾತೆಯ ಪ್ರೊಫೈಲ್ ಅನ್ನು “ಚೌಕಿದಾರ್ ಅಮಿತ್ ಶಾ’ ಎಂದು ಬದಲಾಯಿಸಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ದೇಶಾದ್ಯಂತ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಶಾಸಕರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯ ಮಂತ್ರಿಗಳು ಸೇರಿದಂತೆ ಅನೇಕರು “ಚೌಕಿದಾರ’ರಾಗಿ ಬದಲಾಗಿದ್ದಾರೆ.
ರಾಜ್ಯದಲ್ಲೂ ಅಲೆ: ಕರ್ನಾಟಕದಲ್ಲೂ ಚೌಕಿದಾರರ ಅಲೆ ಎದ್ದಿದ್ದು, ಕೆ.ಎಸ್. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಪ್ರಹ್ಲಾದ್ ಜೋಷಿ, ಸಿ.ಟಿ. ರವಿ, ಪ್ರತಾಪ್ ಸಿಂಹ, ಸುರೇಶ್ ಕುಮಾರ್, ನಳಿನ್ ಕುಮಾರ್ ಕಟೀಲು, ಸದಾನಂದ ಗೌಡ ಸೇರಿದಂತೆ ಅನೇಕರು ತಮ್ಮ ಹೆಸರಿನ ಮೊದಲು “ಚೌಕಿದಾರ’ ಎಂಬ ಪದ ಸೇರಿಸಿದ್ದಾರೆ.
ಇದಲ್ಲದೆ, ಟ್ವಿಟರ್ನಲ್ಲಿಯೂ “ಚೌಕಿದಾರ್ ಫಿರ್ ಸೆ’ (ಮಗದೊಮ್ಮೆ ಚೌಕಿದಾರ), “ಚೌಕಿದಾರ್’, “ಚೌಕಿ ದಾರ್ ನರೇಂದ್ರ ಮೋದಿ’ ಎಂಬಿತ್ಯಾದಿ ಹ್ಯಾಷ್ಟ್ಯಾಗ್ಗಳು ಟ್ರೆಂಡ್ ಆಗಿವೆ.
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…