ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. .
ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ವ್ಯಾಪಕ ವಿಳಂಬ ಮತ್ತು ರದ್ದತಿಯಿಂದಾಗಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು ಏರ್ಪೋರ್ಟ್ನಲ್ಲಿ 73 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ನಲ್ಲೂ ತಾಂತ್ರಿಕ ದೋಷ ಉಂಟಾಗಿರುವ ಪರಿಣಾಮ 73 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ನಿನ್ನೆ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನ ಹಾರಾಟ ರದ್ದುಗೊಳಿಸಿದೆ.
ಇಂಡಿಗೋ ಅಧಿಕಾರಿಗಳಿಗೆ ಡಿಜಿಸಿಎ ಬುಲಾವ್
ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ಕಾರಣಗಳನ್ನ ವಿವರಿಸುವಂತೆ ಮತ್ತು ಪರಿಸ್ಥಿತಿ ಸುಧಾರಿಸಲು ಒಂದು ಯೋಜನೆ ನೀಡುವಂತೆ ಡಿಜಿಸಿಎ (DGCA) ಇಂಡಿಗೋಗೆ ಸೂಚಿಸಿದೆ. ಅಲ್ಲದೇ ಈ ಕುರಿತು ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ಬುಲಾವ್ ನೀಡಿದೆ.
48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತೇವೆ: ಇಂಡಿಗೋ
ಉಂಟಾಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಇಂಡಿಗೋ ಸಂಸ್ಥೆಯು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.
ಸಣ್ಣಪುಟ್ಟ ತಾಂತ್ರಿಕ ದೋಷಗಳು, ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಿಮಾನ ನಿಲ್ದಾಣದಲ್ಲಿನ ದಟ್ಟಣೆ ಹಾಗೂ ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಅನುಷ್ಠಾನ ಸೇರಿದಂತೆ ಅನಿರೀಕ್ಷಿತ ಕಾರ್ಯಾಚರಣೆ ಸವಾಲುಗಳು ಅಡಚಣೆಗೆ ಕಾರಣವಾಗಿದೆ. ಇದನ್ನ ನಾವು ಊಹಿಸಿಯೂ ಇರಲಿಲ್ಲ. ಹಾಗಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ಕಾರ್ಯಾಚರಣೆ ಸ್ಥಿರಗೊಳಿಸಲು ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಆಗಿದೆ ಎಂದು ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…