Featured

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು. ಆಗ ಯಾರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎನ್ನುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಟೀಕಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಮೋದಿ ತೈಲ ಮಿತಬಳಕೆಗೆ ಕರೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.

ಇದನ್ನೂ ಓದಿ: 

ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿಯವರು ನಾಲ್ಕು ಜನ ಎಸ್ಕಾರ್ಟ್ ಬಿಟ್ರೆ ದೇಶದ ಸಮಸ್ಯೆ ಪರಿಹಾರ ಆಗುತ್ತಾ? ಇಷ್ಟು ದಿನ ಎಲ್ಲವೂ ಸರಿಯಾಗಿದೆ ಎಂದು ಮೋದಿ ಹೇಳುತ್ತಿದ್ದರು. ಈಗ ಯಾಕೆ ದೇಶದ ಆರ್ಥಿಕ ಸ್ಥಿತಿ ಆಪತ್ತಿನಲ್ಲಿದೆ? ಪ್ರಧಾನಿಯವರು ನಾವು ಜಾಗತಿಕವಾಗಿ ಆರ್ಥಿಕ ಸಂಕಷ್ಟದಲ್ಲಿದ್ದೇವೆ ಎಂದು ಮುಂಚೆಯೇ ಸಂಸತ್ತಿನಲ್ಲಿ ಹೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.

ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಏನಾದರೂ ಒಳ್ಳೆ ಸುದ್ದಿ ಇದ್ದರೆ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಹೇಳುತ್ತಾರೆ. ಇದನ್ನು ಮೊದಲೇ ಯಾಕೆ ಜನರ ಹತ್ತಿರ ಹೇಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಐದು ದಿನಗಳ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಜಾಗತಿಕ ಮಟ್ಟದ ಬೆಳವಣಿಗೆಗಳ ಕುರಿತು ನೆದರ್ಲೆಂಡ್‌ನಲ್ಲಿ ಭಾಷಣ ಮಾಡುತ್ತಾ, ಈ ಮೊದಲು ಕೊರೊನಾ ಬಂದಿತ್ತು. ಬಳಿಕ ಯುದ್ಧ ಪ್ರಾರಂಭವಾತ್ತು. ಈಗ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಒಟ್ಟಾರೆಯಾಗಿ ಈ ದಶಕ ಇಡೀ ವಿಶ್ವಕ್ಕೆ ವಿಪತ್ತುಗಳ ದಶಕವಾಗಿ ಬದಲಾಗುತ್ತಿದೆ. ಈ ಪರಿಸ್ಥಿತಿ ಬೇಗ ದೂರವಾಗದೇ ಇದ್ದರೆ ಕಳೆದ ಒಂದು ದಶಕದಿಂದ ಮಾಡಿದ ಯಾವುದೇ ಕೆಲಸಗಳಿಂದ ಪ್ರಯೋಜನವಿಲ್ಲ. ವಿಶ್ವದ ಬಹುಪಾಲು ಜನರು ಬಡತನಕ್ಕೆ ಸಿಲುಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.

Vishwa News 24

Recent Posts

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

9 seconds ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

2 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

3 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

5 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

6 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

6 hours ago