ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು. ಆಗ ಯಾರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎನ್ನುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಟೀಕಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಮೋದಿ ತೈಲ ಮಿತಬಳಕೆಗೆ ಕರೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.
ಇದನ್ನೂ ಓದಿ:
ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿಯವರು ನಾಲ್ಕು ಜನ ಎಸ್ಕಾರ್ಟ್ ಬಿಟ್ರೆ ದೇಶದ ಸಮಸ್ಯೆ ಪರಿಹಾರ ಆಗುತ್ತಾ? ಇಷ್ಟು ದಿನ ಎಲ್ಲವೂ ಸರಿಯಾಗಿದೆ ಎಂದು ಮೋದಿ ಹೇಳುತ್ತಿದ್ದರು. ಈಗ ಯಾಕೆ ದೇಶದ ಆರ್ಥಿಕ ಸ್ಥಿತಿ ಆಪತ್ತಿನಲ್ಲಿದೆ? ಪ್ರಧಾನಿಯವರು ನಾವು ಜಾಗತಿಕವಾಗಿ ಆರ್ಥಿಕ ಸಂಕಷ್ಟದಲ್ಲಿದ್ದೇವೆ ಎಂದು ಮುಂಚೆಯೇ ಸಂಸತ್ತಿನಲ್ಲಿ ಹೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.
ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಏನಾದರೂ ಒಳ್ಳೆ ಸುದ್ದಿ ಇದ್ದರೆ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಹೇಳುತ್ತಾರೆ. ಇದನ್ನು ಮೊದಲೇ ಯಾಕೆ ಜನರ ಹತ್ತಿರ ಹೇಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:
ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಐದು ದಿನಗಳ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಜಾಗತಿಕ ಮಟ್ಟದ ಬೆಳವಣಿಗೆಗಳ ಕುರಿತು ನೆದರ್ಲೆಂಡ್ನಲ್ಲಿ ಭಾಷಣ ಮಾಡುತ್ತಾ, ಈ ಮೊದಲು ಕೊರೊನಾ ಬಂದಿತ್ತು. ಬಳಿಕ ಯುದ್ಧ ಪ್ರಾರಂಭವಾತ್ತು. ಈಗ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಒಟ್ಟಾರೆಯಾಗಿ ಈ ದಶಕ ಇಡೀ ವಿಶ್ವಕ್ಕೆ ವಿಪತ್ತುಗಳ ದಶಕವಾಗಿ ಬದಲಾಗುತ್ತಿದೆ. ಈ ಪರಿಸ್ಥಿತಿ ಬೇಗ ದೂರವಾಗದೇ ಇದ್ದರೆ ಕಳೆದ ಒಂದು ದಶಕದಿಂದ ಮಾಡಿದ ಯಾವುದೇ ಕೆಲಸಗಳಿಂದ ಪ್ರಯೋಜನವಿಲ್ಲ. ವಿಶ್ವದ ಬಹುಪಾಲು ಜನರು ಬಡತನಕ್ಕೆ ಸಿಲುಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…