ಹೊಸದಿಲ್ಲಿ: “ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಯೇ ಸಿದ್ಧ ಎಂದು ನಾನು ಶಪಥ ಮಾಡಿದ್ದೇನೆ. ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್ವಾದವನ್ನು ನಿರ್ಮೂಲನೆ ಮಾಡುತ್ತೇನೆ’.
ಮಧ್ಯಪ್ರದೇಶದ ಸಾಗರದಲ್ಲಿ ರವಿವಾರ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಪ್ರಧಾನಿ ಮೋದಿ , ಈ ಚೌಕಿದಾರನು ಪ್ರತಿಯೊಬ್ಬ ಯೋಧನ ನೆತ್ತರಿಗೂ ಪ್ರತೀಕಾರ ತೀರಿಸಲು ಪಣ ತೊಟ್ಟಿದ್ದಾನೆ. ಅದಕ್ಕೆ ನಿಮ್ಮ ಆಶೀರ್ವಾದ ಬೇಕಿದೆ. ಪಾಕಿಸ್ಥಾನದ ಸೂಪರ್ ಫೇವರಿಟ್ ಭಯೋತ್ಪಾದಕ ಮಸೂದ್ ಅಜರ್ಗೆ ವಿಶ್ವಸಂಸ್ಥೆ ಹೇರಿದ ನಿಷೇಧ ಹಾಗೂ ಭಾರತದ ನಿಲುವಿಗೆ ಇತರೆಲ್ಲ ದೇಶಗಳೂ ಸಮ್ಮತಿಸಿದ ರೀತಿಯು ಪಾಕಿಸ್ಥಾನಕ್ಕೆ ಕಪಾಳ ಮೋಕ್ಷವಾದಂತಾಗಿದೆ. ಆದರೆ, ಇದು ಕೇವಲ ಆರಂಭವಷ್ಟೆ. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ. ಈಗ ಪಾಕಿಸ್ಥಾನವೇ ತಾವು ಯಾವ ಹಾದಿಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಬ್ಯಾಕಾಪ್ಸ್ ಎಂಬ ಹೆಸರೇ ಕಾಂಗ್ರೆಸ್ ಅಧ್ಯಕ್ಷರ ಹಿಂಬಾಗಿಲ ಕಾರ್ಯಾಚರಣೆಯನ್ನು ಸೂಚಿಸುತ್ತದೆ. 21ನೇ ಶತಮಾನದ ಒಂದಿಡೀ ದಶಕವನ್ನೇ ಭಾರತವು ಕಳೆದುಕೊಂಡಿತು. 2004ರಲ್ಲಿ ಕಾಂಗ್ರೆಸ್ “ಕುಟುಂಬಕ್ಕೆ ವಿಧೇಯ’ರಾದ ಮನಮೋಹನ್ ಸಿಂಗ್ರನ್ನು ಪ್ರಧಾನಿ ಹುದ್ದೆಗೇರಿಸಿತು.
ಏಕೆಂದರೆ, ಆಗ ರಾಜಕುಮಾರ ಇನ್ನೂ ಆ ಹುದ್ದೆಗೇರಲು ಸಜ್ಜಾಗಿರಲಿಲ್ಲ. ಆತನಿಗೆ ತರಬೇತಿ ನೀಡುವ ಯತ್ನವೆಲ್ಲವೂ ವಿಫಲವಾಯಿತು’ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷರ ಹಗರಣಗಳು ಈಗ ನೆಲ, ಜಲ ಹಾಗೂ ಆಕಾಶದಿಂದಲೂ ಒಂದೊಂದಾಗಿ ಹೊರಬರುತ್ತಿದೆ ಎಂದೂ ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…