Featured

ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ,ದೇಶ ಭಕ್ತಿಯನ್ನು ಪರೀಕ್ಷಿಸಿಕೊಳ್ಳಲು ಅದು ಸೂಕ್ತ ಸ್ಥಳವಲ್ಲ :ಪವನ್ ಕಲ್ಯಾಣ್  -Vishwanews24

ಹೈದರಾಬಾದ್ : ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗಷ್ಟೇ “2019ರ ಲೋಕಸಭೆ ಚುನಾವಣೆ ಬರುವ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ಎರಡು ವರ್ಷದ ಹಿಂದೆಯೇ ನನಗೆ ಹೇಳಿತ್ತು” ಎಂದು ಹೇಳಿಕೆ ನೀಡಿದ್ದ ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಇದೀಗ “ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ನನಗೆ ಇಷ್ಟವಾಗಲ್ಲ” ಎಂದು ಹೇಳುವುದರ ಮೂಲಕ ಸುದ್ದಿಯಾಗಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಮಾತನಾಡಿದ ಪವನ್ ಕಲ್ಯಾಣ್  ‘ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ದೇಶಪ್ರೇಮವೇ?’, ಸಿನಿಮಾ ಮಂದಿರಗಳಲ್ಲಿ ನಮ್ಮ ಕುಟುಂಬದ ಜೊತೆಗೆ ಸಿನಿಮಾವನ್ನು ನೋಡುತ್ತೇವೆ.ಅದು ನಮ್ಮ ದೇಶ ಭಕ್ತಿಯನ್ನು ಪರೀಕ್ಷಿಸಿಕೊಳ್ಳಲು ಅದು ಸೂಕ್ತ ಸ್ಥಳವಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರಪ್ರೇಮವನ್ನು ಕೇವಲ ಸಿನಿಮಾ ಹಾಲ್ ಗೆ ಸೀಮಿತ ಗೊಳಿಸುವ ಕ್ರಮವನ್ನು ಖಂಡಿಸಿದ ಪವನ್ ಕಲ್ಯಾಣ್ “ರಾಜಕೀಯ ಪಕ್ಷಗಳು ತಮ್ಮ ಸಭೆ ನಡೆಯುವ ಮೊದಲು ರಾಷ್ಟ್ರಗೀತೆ ಹಾಡಬಹುದಲ್ಲ. ಸಿನಿಮಾ ಮಂದಿರಗಳಲ್ಲಿ ಮಾತ್ರವೇಕೆ? ದೇಶದ ಅತ್ಯುನ್ನತ ಕಚೇರಿಗಳಲ್ಲೂ ರಾಷ್ಟ್ರಗೀತೆ ಹಾಡಬೇಕು ಎಂದಿದ್ದಾರೆ. ಸಮಾಜದಲ್ಲಿ ಇನ್ನೂ ರೌಡಿಯಿಸಂ, ಭ್ರಷ್ಟಾಚಾರಗಳು ಅಸ್ತಿತ್ವದಲ್ಲಿ ಇವೆ.ಅವುಗಳನ್ನು ನಿರ್ಮೂಲನ ಮಾಡಬೇಕು. ಆ ಮೂಲಕ ನಮ್ಮ ದೇಶಭಕ್ತಿ ತೋರಿಸಬೇಕು ಎಂದರು.

“ರಾಜಕೀಯ ಪಕ್ಷಗಳು ತಮ್ಮ ಸಭೆ ಸಮಾರಂಭಗಳು ಆರಂಭವಾಗುವ ಮುನ್ನವೇಕೆ ರಾಷ್ಟ್ರಗೀತೆಯನ್ನು ಹಾಕುವುದಿಲ್ಲ? ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಹಾಕಬೇಕು? ದೇಶದಲ್ಲಿರುವ ಎಲ್ಲಾ ಕಚೇರಿಗಳಲ್ಲೂ ರಾಷ್ಟ್ರಗೀತೆ ಮೊಳಗಬೇಕು. ಯಾರು ಕಾನೂನನ್ನು ಮಾಡುತ್ತಾರೋ ಅವರು ಕೂಡ ಅದನ್ನು ಪಾಲಿಸಬೇಕು” ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago