ಅಲಹಾಬಾದ್:ಗಂಗಾಯಾತ್ರೆ’ಯ ಮೂಲಕ ಉತ್ತರ ಪ್ರದೇಶದಲ್ಲಿ ಪಕ್ಷದ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶ ಮತ್ತು ಸಂವಿಧಾನ ಅಪಾಯದಲ್ಲಿರುವುದರಿಂದ ನಾನು ಸಕ್ರಿಯ ರಾಜಕಾರಣಕ್ಕೆ ಬಂದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ನಾನು ಮನೆಯಲ್ಲಿ ಕುಳಿತಿದ್ದೆ. ನಾನು ಮನೆಯಲ್ಲೇ ಕುಳಿತಿರಬಹುದಿತ್ತು. ಆದರೆ ನಾನಿಂದು ಮನೆಯಿಂದ ಹೊರಗೆ ಹೆಜ್ಜೆ ಇಟ್ಟಿದ್ದೇನೆ, ಅದಕ್ಕೆ ಕಾರಣವೇನು? ದೇಶ ಮತ್ತು ಸಂವಿಧಾನ ಅಪಾಯದಲ್ಲಿದ್ದಕ್ಕೆ ನಾನು ಮುಂದಡಿ ಇಡಬೇಕಾಯಿತು ಎಂದರು.
ನಿಮ್ಮ ಮತ ನಿಮ್ಮ ಮಕ್ಕಳ ಭವಿಷ್ಯವನ್ನು ನಿರ್ಧರಿಸುತ್ತದೆ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ. ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ ನಿಮಗಾಗಿ ಕೆಲಸ ಮಾಡುವ ಸರಕಾರವನ್ನು ಅಧಿಕಾರಕ್ಕೆ ತನ್ನಿ. ಇದು ಎಲ್ಲರು ಎಚ್ಚೆತ್ತುಕೊಳ್ಳಬೇಕಾದ ಸಮಯ. ದೇಶವನ್ನು ಒಡೆಯುವವರ ವಿರುದ್ಧ ರಾಹುಲ್ ಆರಂಭಿಸಿರುವ ಹೋರಾಟಕ್ಕೆ ಬಲ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…