Featured

ದೇಶ ವಿಭಜನೆಯ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಹೇಳಿದ ಮಾತಿಗೆ ಈಗಲೂ ಬದ್ಧ , ತಾಕತ್ತಿದ್ದರೆ ಕೇಸ್ ಹಾಕಲಿ : ಈಶ್ವರಪ್ಪ – Vishwanews24

ದೇಶ ವಿಭಜನೆಯ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಹೇಳಿದ ಮಾತಿಗೆ ಈಗಲೂ ಬದ್ಧ , ತಾಕತ್ತಿದ್ದರೆ ಕೇಸ್ ಹಾಕಲಿ : ಈಶ್ವರಪ್ಪ

ಶಿವಮೊಗ್ಗ: ದೇಶ ವಿಭಜನೆಯ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧ. ಅವರಿಗೆ ತಾಕತ್ತಿದ್ದರೆ ಕೇಸ್ ಹಾಕಲಿ. ಸಂಸದ ಡಿ.ಕೆ‌.ಶಿವಕುಮಾರ್ ದಕ್ಷಿಣ ಭಾರತವನ್ನು ವಿಭಜಿಸುವ ಹೇಳಿಕೆ ನೀಡಿದ್ದಾರೆ. ವಿನಯ್ ಕುಲಕರ್ಣಿ ಹಾಗೂ ಡಿ.ಕೆ‌.ಶಿವಕುಮಾರ್ ಬೆಂಬಲ ನೀಡಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಇದನ್ನು ಖಂಡಿಸಿದ್ದಾರೆ. ಹೀಗಿರುವಾಗ ಎಚ್.ಕೆ.ಪಾಟೀಲ್ ಈ ರೀತಿ ಮಾತನಾಡಿರುವುದು ಅಚ್ಚರಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, 24 ಗಂಟೆಯೊಳಗೆ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೇಸ್ ದಾಖಲಿಸಲಾಗುವುದು ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪಾಟೀಲ್ ತಂದೆ ರಾಷ್ಟ್ರ ಭಕ್ತರಾಗಿದ್ದವರು. ಅವರ ಬಗ್ಗೆ ಗೌರವ ಇದೆ. ಅವರು ಕೇಸ್ ಹಾಕಲಿ ಎಂದು ಆಗ್ರಹಿಸುತ್ತೇನೆ. ಆಗ ಕೋರ್ಟ್ ಗೆ ಮಲ್ಲಿಕಾರ್ಜುನ ಖರ್ಗೆ ಸಹ ಬರಬೇಕಾಗುತ್ತದೆ. ನ್ಯಾಯಾಲಯವು ದೇಶ ದ್ರೋಹಿಗಳಿಗೆ ಮನ್ನಣೆ ನೀಡುತ್ತದೆಯೋ, ರಾಷ್ಟ್ರ ಭಕ್ತರಿಗೆ ಮನ್ನಣೆ ನೀಡುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.

ಮಂಡ್ಯ ಬಗ್ಗೆ ಮಾತನಾಡಿ, ಇದಕ್ಕೆ ರಾಜ್ಯ ಸರ್ಕಾರದ ಧೋರಣೆಯೇ ಕಾರಣ. ಬಂದ್ ಯಶಸ್ವಿ ಬಗ್ಗೆ ಸಂತೋಷವಾಗಿಲ್ಲ. ಬದಲಿಗೆ ಈ ದೇಶದಲ್ಲಿ ಹನುಮ ಧ್ವಜ ಹಾರಿಸಲು ಅವಕಾಶ ಇಲ್ಲವಲ್ಲ‌ ಎಂದು ಬೇಸರವಾಗುತ್ತಿದೆ. ಮುಂದೆ ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಬಗ್ಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ತುಷ್ಟಿಕರಣ ಮಾಡುತ್ತಿದೆ. ಇದರ ಭಾಗವಾಗಿಯೇ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯಲ್ಲೂ ಅವರಿಗೆ ಅನುಕೂಲ ಮಾಡಿಕೊಡುತ್ತಿದೆ. ಇದು ಸಹ ಅದರ ಒಂದು ಭಾಗವೇ ಆಗಿದೆ. ಅವರು ಎಷ್ಟೇ ಎಫ್ಐಆರ್ ದಾಖಲಿಸಲಿ ನಾವು ಹೆದರುವುದಿಲ್ಲ. ರಾಷ್ಟ್ರಭಕ್ತರಾದ ನಾವು ಇದನ್ನು ಎದುರಿಸುತ್ತೇವೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

6 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

9 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

10 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

12 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

12 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

15 hours ago