ಕೇವಡಿಯಾ (ಗುಜರಾತ್): ಭಾರತಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಜಾಗದಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಎಂದು ಸಿಬಿಐ, ಕೇಂದ್ರ ಜಾಗೃತ ಆಯೋಗದ (ಸಿವಿಸಿ) ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ.
ಗುಜರಾತ್ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಎಷ್ಟೇ ಬಲಶಾಲಿಯಾಗಿದ್ದರೂ ದೇಶದ ಹಾಗೂ ಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
ದೇಶದ ಬ್ಯಾಂಕ್ಗಳಿಗೆ ಸಾಲ ಮರುಪಾವತಿ ಮಾಡದೆ ವಿದೇಶಗಳಲ್ಲಿ ಆಶ್ರಯ ಪಡೆದಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ವಿರುದ್ಧ ಸರ್ಕಾರವು ಕಾನೂನು ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಅವರು ಈ ಹೇಳಿಕೆ ನೀಡಿದ್ದಾರೆ.
‘ನೀವು ಈ ಮಣ್ಣು ಹಾಗೂ ತಾಯಿ ಭಾರತಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂಬುದು ನೆನಪಿರಲಿ. ನಮ್ಮ ದೇಶದ ವಿರುದ್ಧ ಕಾರ್ಯಾಚರಿಸುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲಿಯೂ ಸುರಕ್ಷಿತ ನೆಲೆ ಇರದಂತೆ ನೋಡಿಕೊಳ್ಳಬೇಕಿದೆ. ದೇಶದ ಹಿತಾಸಕ್ತಿಗಾಗಿ ನಾವು ಕೆಲಸ ಮಾಡೋಣ’ ಎಂದು ಮೋದಿ ಹೇಳಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…