ಕೇವಡಿಯಾ (ಗುಜರಾತ್): ಭಾರತಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಜಾಗದಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಎಂದು ಸಿಬಿಐ, ಕೇಂದ್ರ ಜಾಗೃತ ಆಯೋಗದ (ಸಿವಿಸಿ) ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ.
ಗುಜರಾತ್ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಎಷ್ಟೇ ಬಲಶಾಲಿಯಾಗಿದ್ದರೂ ದೇಶದ ಹಾಗೂ ಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
ದೇಶದ ಬ್ಯಾಂಕ್ಗಳಿಗೆ ಸಾಲ ಮರುಪಾವತಿ ಮಾಡದೆ ವಿದೇಶಗಳಲ್ಲಿ ಆಶ್ರಯ ಪಡೆದಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ವಿರುದ್ಧ ಸರ್ಕಾರವು ಕಾನೂನು ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಅವರು ಈ ಹೇಳಿಕೆ ನೀಡಿದ್ದಾರೆ.
‘ನೀವು ಈ ಮಣ್ಣು ಹಾಗೂ ತಾಯಿ ಭಾರತಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂಬುದು ನೆನಪಿರಲಿ. ನಮ್ಮ ದೇಶದ ವಿರುದ್ಧ ಕಾರ್ಯಾಚರಿಸುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲಿಯೂ ಸುರಕ್ಷಿತ ನೆಲೆ ಇರದಂತೆ ನೋಡಿಕೊಳ್ಳಬೇಕಿದೆ. ದೇಶದ ಹಿತಾಸಕ್ತಿಗಾಗಿ ನಾವು ಕೆಲಸ ಮಾಡೋಣ’ ಎಂದು ಮೋದಿ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…