ಕಾನ್ಪುರ, : ದೇಶ ಸೇವೆಯ ವಿಚಾರದಲ್ಲಿ ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ನಡೆಯನ್ನೇ ಅನುಸರಿಸುತ್ತೇನೆ ಎಂದು ಉತ್ತರ ಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭರವಸೆ ನೀಡಿದ್ದಾರೆ.
ಚುನಾವಣೆಯ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜತೆ ತಮ್ಮನ್ನು ತಾವು ಹೋಲಿಸಿಕೊಳ್ಳುವುದಿಲ್ಲ. ಇಂದಿರಾಜಿಯವರ ಮುಂದೆ ನಾನು ಏನೂ ಅಲ್ಲ. ಆದರೆ ಅವರ ಹೃದಯದಲ್ಲಿದ್ದ ಸೇವೆಯ ಆಸೆಯು ನನ್ನ ಮತ್ತು ಸೋದರನ ಹೃದಯದಲ್ಲಿಯೂ ಇದೆ. ಇದರಿಂದ ನಮ್ಮನ್ನು ಯಾರು ಪ್ರತ್ಯೇಕಿಸಲಾರರು ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನೀವು ನಮಗೆ ಅವಕಾಶ ನೀಡುತ್ತೀರೋ, ಇಲ್ಲವೋ ಆದರೆ ನಿಮ್ಮ ಸೇವೆ ಮಾಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ದೇಶದ ಹಿತಕ್ಕಿಂತಲೂ ಕೇವಲ ಅವರ ಏಳಿಗೆ ಕುರಿತಷ್ಟೇ ಕಾಳಜಿ ಹೊಂದಿದ್ದಾರೆ. ಬಿಜೆಪಿ ಸರ್ಕಾರವು ಕೇವಲ ಪ್ರಚಾರ ಮತ್ತು ತೋರ್ಪಡಿಕೆಯ ಕೆಲಸವಸ್ಟೇ ಮಾಡುತ್ತಿದೆ ಎಂದು ತಿಳಿಸಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…