ಮಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ದೇಹದಾನ, ಅಂಗಾಂಗ ದಾನಗಳ ಕುರಿತು ಜನರಲ್ಲಿ ಸಾಕಷ್ಟು ಅರಿವು ಮೂಡುತ್ತಿರುವ ದಿನಗಳಲ್ಲಿ ಈಕೆಯೂ ಅಂಥದ್ದೇ ಒಂದು ಉದಾಹರಣೆಯನ್ನು ಉಳಿಸಿಹೋಗಿದ್ದಾಳೆ. ಅಶೋಕ ನಗರದ ಪ್ರತೀಕ್ಷಾ (16) ಪ್ರತಿಭಾವಂತ ವಿದ್ಯಾರ್ಥಿನಿ. ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಆಕೆಗೆ ಸಾವೇ ಖಚಿತ ಎನಿಸತೊಡಗಿದ್ದಾಗ ತನ್ನ ಪೋಷಕರಲ್ಲಿ, “ನಾನು ಒಂದುವೇಳೆ ಇಲ್ಲವಾದರೆ ದೇಹವನ್ನು ದಾನ ಮಾಡಿ’ ಎಂದಿದ್ದಳಂತೆ. ಅದು ಅವಳ ಕೊನೆ ಇಚ್ಛೆ. ಅದೃಷ್ಟ ಕೈಗೂಡಲಿಲ್ಲ; ಕೊನೆಯುಸಿರೆಳೆದಳು. ಆಕೆಯ ಪೋಷಕರಾದ ಕುಮಾರಸ್ವಾಮಿ ಕೊಕ್ಕಡ ಹಾಗೂ ವಂದನಾ ದಂಪತಿ ತಮ್ಮ ಮಗಳ ಇಚ್ಛೆಯನ್ನು ಗುರುವಾರ ನೆರವೇರಿಸಿದರು.
ಕುಮಾರಸ್ವಾಮಿ – ವಂದನಾ ದಂಪತಿಗೆ ಮೂವರು ಮಕ್ಕಳು. ಹಿರಿಯ ಪುತ್ರ ಪ್ರಜ್ವಲ್ ಕೃಷ್ಣ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಪದವಿ ಕಲಿಯುತ್ತಿದ್ದರೆ, ಅನಂತರ ಹುಟ್ಟಿದ ಪ್ರತೀಕ್ಷಾ ಮತ್ತು ಪ್ರೀತಂ ಅವಳಿ ಮಕ್ಕಳು. ಇಬ್ಬರೂ ಈಗ ಕೊಡಿಯಾಲ್ಬೈಲ್ನ ಶಾರದಾ ವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. ಪ್ರತೀಕ್ಷಾಳಿಗೆ 6ನೇ ತರಗತಿ ಓದುತ್ತಿದ್ದಾಗ ಎಲುಬಿನ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಎರಡು ವರ್ಷಗಳ ಚಿಕಿತ್ಸೆಯ ಬಳಿಕ ಗುಣಮುಖ ಹೊಂದಿದ್ದಳು. ಆದರೆ ಒಂದೇ ವರ್ಷದಲ್ಲಿ ಕಾಯಿಲೆ ಮರುಕಳಿಸಿತ್ತು. ಆ ಬಳಿಕ ಚಿಕಿತ್ಸೆ ಪಡೆಯುತ್ತಲೇ ವ್ಯಾಸಂಗವನ್ನು ಮುಂದುವರಿಸಿದ್ದಳು. ಒಟ್ಟು ಐದು ವರ್ಷಗಳ ಸುದೀರ್ಘ ಅವಧಿಯ ಚಿಕಿತ್ಸೆಯೂ ಫಲಕಾರಿಯಾಗದೆ ಬುಧವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಳು.
ಪ್ರತೀಕ್ಷಾ 20 ದಿನಗಳ ಹಿಂದೆ, ತಾನು ಸತ್ತರೆ ದೇಹವನ್ನು ಕೆಎಂಸಿಗೆ ದಾನ ಮಾಡಬೇಕೆಂದು ತಾಯಿಯ ಬಳಿ ಹೇಳಿದ್ದಳು. ಅದರಂತೆ ಗುರುವಾರ ದೇಹವನ್ನು ಹಸ್ತಾಂತರಿಸಲಾಯಿತು.
ಜಾಹೀರಾತುಗಳು
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…