Featured

ದೇಹ ಸದೃಢವಾಗಿಸುತ್ತದೆ ಎಂದು 39 ನಾಣ್ಯಗಳು ಮತ್ತು 37 ಅಯಸ್ಕಾಂತ  ನುಂಗಿದ ವ್ಯಕ್ತಿ – Vishwanews24

ದೇಹ ಸದೃಢವಾಗಿಸುತ್ತದೆ ಎಂದು 39 ನಾಣ್ಯಗಳು ಮತ್ತು 37 ಅಯಸ್ಕಾಂತ  ನುಂಗಿದ ವ್ಯಕ್ತಿ

ನವದೆಹಲಿ: ಸತು ದೇಹವನ್ನು ಸದೃಢವಾಗಿಸುತ್ತದೆ ಎಂದು ನಾಣ್ಯಗಳು ಹಾಗೂ ಅಯಸ್ಕಾಂತಗಳನ್ನು ನುಂಗಿದ್ದ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ಸುಮಾರು 39 ನಾಣ್ಯಗಳು ಮತ್ತು 37 ಅಯಸ್ಕಾಂತಗಳನ್ನು  ವೈದ್ಯರು ಹೊರತೆಗೆದಿದ್ದಾರೆ.

ದೆಹಲಿಯ  26 ವರ್ಷದ ರೋಗಿಯೊಬ್ಬರು 20 ದಿನಗಳಿಗೂ ಹೆಚ್ಚು ಕಾಲ ಪದೇ ಪದೇ ವಾಂತಿ ಮತ್ತು ಹೊಟ್ಟೆ ನೋವಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿ ಏನನ್ನು ತಿನ್ನದೇ ಇದ್ದಾಗ ಅನುಮಾನಗೊಂಡು ವೈದ್ಯರು, ಎಕ್ಸ್ ರೇ ಮಾಡಿ ನೋಡಿದಾಗ ನಾಣ್ಯಗಳು ಹಾಗೂ ಅಯಸ್ಕಾಂತಗಳು ಕರುಳಿನಲ್ಲಿ ಇರುವುದು ಬೆಳಕಿಗೆ ಬಂದಿದೆ. ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ಹೊರಗೆ ತೆಗೆದಿದ್ದಾರೆ.

ವ್ಯಕ್ತಿಯ ಹೊಟ್ಟೆಯಿಂದ 1, 2, 5 ರೂ.ಗಳ ನಾಣ್ಯಗಳು ಮತ್ತು ಹೃದಯ, ಗೋಳ, ನಕ್ಷತ್ರ, ಬುಲೆಟ್ ಮತ್ತು ತ್ರಿಕೋನ ಆಕಾರದ ಅಯಸ್ಕಾಂತಗಳನ್ನು ಹೊರತೆಗೆಯಲಾಗಿದೆ. ಈ ಹಿಂದೆಯೂ ರೋಗಿಗಳು ಅಯಸ್ಕಾಂತ ಹಾಗೂ ನಾಣ್ಯಗಳನ್ನು ಸೇವಿಸಿದ ಸಾಕಷ್ಟು ಉದಾಹರಣೆಗಳಿವೆ ಎಂದು ಚಿಕಿತ್ಸೆ ನೀಡಿದ ವೈದ್ಯರಾದ ಡಾ.ತರುಣ್ ಮಿತ್ತಲ್ ಹೇಳಿದ್ದಾರೆ.

ನಾಣ್ಯವನ್ನು ನುಂಗಿದ ವ್ಯಕ್ತಿಯು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ದೇಹ ಗಟ್ಟಿಯಾಗುತ್ತದೆ ಎಂದು ನಾಣ್ಯಗಳು ಮತ್ತು ಅಯಸ್ಕಾಂತಗಳನ್ನು ನುಂಗಿದ್ದಾನೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

6 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

7 hours ago