Featured

ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್ – vishwanews24

ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್

ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಅನೇಕರು ಪೋಸ್ಟ್​ಗಳನ್ನು ಮಾಡಿದ್ದರು. ಈ ವಿಷಯದಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಈ ಮೂಲಕ ವಿವಾದಕ್ಕೆ ಕೊನೆ ಹಾಡುವ ಪ್ರಯತ್ನ ಮಾಡಿದ್ದಾರೆ.

ರಣವೀರ್ ಅವರು ನಡೆದುಕೊಂಡ ರೀತಿಗೆ ಸಾಕಷ್ಟು ಟೀಕೆಗಳು ಕೇಳಿ ಬಂದವು. ಈಗ ರಣವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ’ ಎಂದಿದ್ದಾರೆ ರಣವೀರ್ ಸಿಂಗ್.

‘ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ರಣವೀರ್ ಬರೆದುಕೊಂಡಿದ್ದಾರೆ.

ರಣವೀರ್ ಸಿಂಗ್ ಹಾಗೂ ರಿಷಬ್ ಶೆಟ್ಟಿ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಈ ವೇಳೆ ರಣವೀರ್ ಸಿಂಗ್ ಅವರು ರಿಷಬ್​ ನಟನೆಯ ಕಾಂತಾರ ಚಿತ್ರವನ್ನು ಹೊಗಳಿದರು. ‘ದೈವ’ ಎನ್ನುವ ಬದಲು ‘ದೆವ್ವ’ ಎಂದರು. ಇಷ್ಟೇ ಅಲ್ಲ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಿಸಲು ಹೋದರು. ಇದು ಹಾಸ್ಯಾಸ್ಪದ ಎನಿಸಿತು. ರಣವೀರ್ ಓರ್ವ ಜೋಕರ್ ರೀತಿ ಕಾಣಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

9 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

9 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

10 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

10 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

10 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

13 hours ago