ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:
ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕಾಲು ಸಂಕದ ಮೇಲೆ ಬಂದಾಗ ಏಕಾಏಕಿ ಮುರಿದು ಬಿದ್ದಿದೆ. ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದು ಕಲ್ಲಿನ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ಗಾಯಗಳಾಗಿದೆ. ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…