ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:
ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕಾಲು ಸಂಕದ ಮೇಲೆ ಬಂದಾಗ ಏಕಾಏಕಿ ಮುರಿದು ಬಿದ್ದಿದೆ. ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದು ಕಲ್ಲಿನ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ಗಾಯಗಳಾಗಿದೆ. ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…