ಮಂಗಳೂರು: ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರೆದು ಹಾಕಿರುವಂತಹ ಕೃತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರುವಂತಹ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ಧೇಶ ಪೂರ್ವಕವಾಗಿ ಇಂತಹ ಕೆಲಸ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ನಕಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರಹದಿಂದ ಸಮಾಜಕ್ಕೆ ಅತ್ಯಂತ ನೋವು ಉಂಟಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಜರಗಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…