Featured

ದೈವಾರಾಧನೆ ನಮ್ಮ ನೆಲಮೂಲ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ , ಮನಸ್ಸಿಗೆ ತುಂಬಾ ನೋವಾಗಿದೆ : ನಟ ರಿಷಬ್ ಶೆಟ್ಟಿ ಅಸಮಧಾನ – vishwanews24

ದೈವಾರಾಧನೆ ನಮ್ಮ ನೆಲಮೂಲ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ , ಮನಸ್ಸಿಗೆ ತುಂಬಾ ನೋವಾಗಿದೆ : ನಟ ರಿಷಬ್ ಶೆಟ್ಟಿ ಅಸಮಧಾನ

ಬೆಂಗಳೂರು : ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ ಕಾಂತಾರ ನಟ ರಿಷಬ್ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದು. ಈ ರೀತಿ ಮಾಡುವುದರಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ,

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೈವಾರಧನೆ ಬಗ್ಗೆ ಕಾಂತಾರ ಮೊದಲ ಸಿನೆಮಾ ಅಲ್ಲ , ತುಳು ಮತ್ತು ಕನ್ನಡದಲ್ಲೂ ಸಿನೆಮಾಗಳು ಬಂದಿವೆ. ಚೋಮನದುಡಿಯಲ್ಲೂ ದೈವದ ಬಗ್ಗೆ ಹೇಳಿದ್ದಾರೆ. ಆದರೆ ಕಾಂತಾರ ಸಿನೆಮಾ ಮಾಡಿದ ರೀತಿ ಜನರಿಗೆ ತಲುಪಿದೆ. ನಮ್ಮ ಉದ್ದೇಶ ಇದ್ದಿದ್ದು, ದೈವದ ಆರಾಧನೆ ಬಗ್ಗೆ ಅದರ ಶಕ್ತಿ ಬಗ್ಗೆ ತಿಳಿಸುವುದು ಮಾತ್ರ ಆಗಿತ್ತು ಎಂದರು. ಕಾಂತಾರದ ಗೆಲುವು ಎಷ್ಟು ಖುಷಿ ಕೊಡ್ತೋ, ಅಷ್ಟೇ ದುಃಖವೂ ಕೊಟ್ಟಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.

ರಿಷಬ್​ ಶೆಟ್ಟಿ ನಂದಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಅವರು, ದೈವರಾಧನೆ ಕುರಿತು ಸಾಕಷ್ಟು ತುಳು, ಕನ್ನಡ ಸಿನಿಮಾ ಬಂದಿವೆ. ಈ ಕಾಲಘಟ್ಟದಲ್ಲಿ ದೈವರಾಧನೆ ಶ್ರೇಷ್ಠತೆ ಹೇಳೋಕೆ ಈ ಸಿನಿಮಾ ಮಾಡಿದ್ದೀನಿ. ಆದರೆ ಕಾಂತಾರ ನಂತರ ದೈವದ ಹಾಡಿಗೆ ತಪ್ಪಾಗಿ ರೀಲ್ಸ್ ಮಾಡ್ತಿರೋದು ಜಾಸ್ತಿ ಆಗ್ತಿದೆ. ದಯವಿಟ್ಟು ಅದೆಲ್ಲವನ್ನೂ ಮಾಡ್ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ದೈವರಾಧನೆಗೆ ಅಪಮಾನ ಮಾಡ್ಬೇಡಿ. ದೈವರಾಧನೆ, ಪಂಜುರ್ಲಿ, ಕೋಲ ನಮ್ಮ ನೆಲಮೂಲ ಸಂಸ್ಕೃತಿ. ನಮ್ಮ ನೆಲದ ಕಥೆ ಹೇಳಬೇಕು ಅಂತಾ ಈ ಸಿನಿಮಾ ಮಾಡಿರೋದು ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago