Featured

ದೈವಾರಾಧನೆ ನಮ್ಮ ನೆಲಮೂಲ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ , ಮನಸ್ಸಿಗೆ ತುಂಬಾ ನೋವಾಗಿದೆ : ನಟ ರಿಷಬ್ ಶೆಟ್ಟಿ ಅಸಮಧಾನ – vishwanews24

ದೈವಾರಾಧನೆ ನಮ್ಮ ನೆಲಮೂಲ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ , ಮನಸ್ಸಿಗೆ ತುಂಬಾ ನೋವಾಗಿದೆ : ನಟ ರಿಷಬ್ ಶೆಟ್ಟಿ ಅಸಮಧಾನ

ಬೆಂಗಳೂರು : ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ ಕಾಂತಾರ ನಟ ರಿಷಬ್ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದು. ಈ ರೀತಿ ಮಾಡುವುದರಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ,

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೈವಾರಧನೆ ಬಗ್ಗೆ ಕಾಂತಾರ ಮೊದಲ ಸಿನೆಮಾ ಅಲ್ಲ , ತುಳು ಮತ್ತು ಕನ್ನಡದಲ್ಲೂ ಸಿನೆಮಾಗಳು ಬಂದಿವೆ. ಚೋಮನದುಡಿಯಲ್ಲೂ ದೈವದ ಬಗ್ಗೆ ಹೇಳಿದ್ದಾರೆ. ಆದರೆ ಕಾಂತಾರ ಸಿನೆಮಾ ಮಾಡಿದ ರೀತಿ ಜನರಿಗೆ ತಲುಪಿದೆ. ನಮ್ಮ ಉದ್ದೇಶ ಇದ್ದಿದ್ದು, ದೈವದ ಆರಾಧನೆ ಬಗ್ಗೆ ಅದರ ಶಕ್ತಿ ಬಗ್ಗೆ ತಿಳಿಸುವುದು ಮಾತ್ರ ಆಗಿತ್ತು ಎಂದರು. ಕಾಂತಾರದ ಗೆಲುವು ಎಷ್ಟು ಖುಷಿ ಕೊಡ್ತೋ, ಅಷ್ಟೇ ದುಃಖವೂ ಕೊಟ್ಟಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.

ರಿಷಬ್​ ಶೆಟ್ಟಿ ನಂದಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಅವರು, ದೈವರಾಧನೆ ಕುರಿತು ಸಾಕಷ್ಟು ತುಳು, ಕನ್ನಡ ಸಿನಿಮಾ ಬಂದಿವೆ. ಈ ಕಾಲಘಟ್ಟದಲ್ಲಿ ದೈವರಾಧನೆ ಶ್ರೇಷ್ಠತೆ ಹೇಳೋಕೆ ಈ ಸಿನಿಮಾ ಮಾಡಿದ್ದೀನಿ. ಆದರೆ ಕಾಂತಾರ ನಂತರ ದೈವದ ಹಾಡಿಗೆ ತಪ್ಪಾಗಿ ರೀಲ್ಸ್ ಮಾಡ್ತಿರೋದು ಜಾಸ್ತಿ ಆಗ್ತಿದೆ. ದಯವಿಟ್ಟು ಅದೆಲ್ಲವನ್ನೂ ಮಾಡ್ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ದೈವರಾಧನೆಗೆ ಅಪಮಾನ ಮಾಡ್ಬೇಡಿ. ದೈವರಾಧನೆ, ಪಂಜುರ್ಲಿ, ಕೋಲ ನಮ್ಮ ನೆಲಮೂಲ ಸಂಸ್ಕೃತಿ. ನಮ್ಮ ನೆಲದ ಕಥೆ ಹೇಳಬೇಕು ಅಂತಾ ಈ ಸಿನಿಮಾ ಮಾಡಿರೋದು ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

20 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

21 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago