ಬೆಂಗಳೂರು : ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್ ವಿಚಾರದ ಬಗ್ಗೆ ಬೆಂಗಳೂರಲ್ಲಿ ನಟ ಚೇತನ್ ಮಾತನಾಡಿ ʻ ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ
ಚೇತನ್ ಆಡಿದ ಮಾತುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗುತ್ತಿದ್ದಂತೆಯೇ ಅದಕ್ಕೆ ಸ್ಪಷ್ಟನೆ ಎನ್ನುವಂತೆ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು ನಟ. ಅಲ್ಲಿಯೂ ತಾವಾಡಿದ ಮಾತಿಗೆ ಬದ್ಧರಾಗಿಯೇ ಮಾತನಾಡಿದರು. ಬುಡಕಟ್ಟು ನಮ್ಮ ಮೂಲ ಸಂಸ್ಕೃತಿ. ಇವರಿಗೆ 70 ಸಾವಿರ ವರ್ಷಕ್ಕೂ ಅಧಿಕ ಇತಿಹಾಸವಿದೆ. ಹಿಂದೂ ಧರ್ಮಕ್ಕೆ ಕೇವಲ ಮೂರುವರೆ ಸಾವಿರ ವರ್ಷ ಇತಿಹಾಸ. ದೈವಾರಾಧನೆ, ಭೂತಕೋಲ ಇವುಗಳು ಬುಡಕಟ್ಟು ಸಂಸ್ಕೃತಿಗಳು. ಅದು ಹೇಗೆ ಹಿಂದೂ ಸಂಸ್ಕೃತಿ ಆಗುತ್ತವೆ? ಎಂದು ನಿರೂಪಿಸಿದರು.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
‘ಕಾಂತಾರ’ ಕುರಿತು ಪ್ರತಿಕ್ರಿಯಿಸಿದ್ದ ನಟ ಚೇತನ್ ಅಹಿಂಸಾ, ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…