Featured

ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ : ಅನುಶ್ರೀ – vishwanews24

ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ : ಅನುಶ್ರೀ

ಪ್ರಯಾಗ್‌ರಾಜ್‌: ಮಹಾ ಕುಂಭಮೇಳಕ್ಕೆ  ತೆರಳಿರುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀಯವರು ತಮ್ಮ ದೈವಿಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಪುಣ್ಯ ನದಿಯಲ್ಲಿ ಮುಳುಗಿ ಏಳುವಾಗ ತುಂಬಾ ಭಾವುಕ ಅನುಭವವನ್ನು ನಾನು ಅನುಭವಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಆ ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ. ಒಂದು ಬಿಸಿ ವಸ್ತುವನ್ನು ಮುಟ್ಟಿದವರಿಗೆ ಹೇಗೆ ತಿಳಿಯುತ್ತದೆಯೋ ಈ ಅನುಭವ ಸಹ ಹಾಗೆಯೇ. ಆ ಅದ್ಭುತ ಅನುಭವವನ್ನು ಸುಧಾರಿಸಿಕೊಳ್ಳಲು ಸ್ವಲ್ಪ ಸಮಯಬೇಕು. ಹರಹರ ಮಹಾದೇವ ಎಂದು ತೆರಳುವಾಗ ಅಲ್ಲಿನ ದೀಪಾಲಂಕಾರಗಳಲ್ಲಿ ಶಿವನೇ ಆಶೀರ್ವಾದ ಮಾಡುವಂತೆ ಕಾಣುತ್ತದೆ. ನಾನಂತೂ ನೀರಿನಲ್ಲಿ ಮುಳುಗಿದಾಗೆಲ್ಲ ಕಣ್ಣೀರು ಹಾಕಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

144 ವರ್ಷಕ್ಕೆ ಒಮ್ಮೆ ಇದು ನಡೆಯೋದು, ಎಷ್ಟು ಜನರಿಗೆ ಈ ಅವಕಾಶ ಸಿಗುತ್ತೆ? ಎಲ್ಲಾ ಹೇಳ್ತಾರೆ ಇದು ಕಲಿಗಾಲ ಎಲ್ಲ ಪಾಪ ಮಾಡಿದವರು ಅಂತಾರೆ. ಆದರೆ ನನಗೆ ಅನ್ನಿಸಿದ್ದು, ಈ ಭಾಗ್ಯ ನಮಗೆ ಸಿಕ್ಕಿದೆ. ನಾವು ಪುಣ್ಯವಂತರು ಎಂದು ಹೇಳಿಕೊಂಡಿದ್ದಾರೆ.

ಇಲ್ಲಿ ಮಹಿಳೆಯರಿಗೆ ಸುರಕ್ಷತೆ ಇದೆ. ಇಂತಹ ವ್ಯವಸ್ಥೆ ಬಗ್ಗೆ ಹೆಮ್ಮೆ ಇದೆ. ಪೊಲೀಸ್‌ ಸಿಬ್ಬಂದಿ ಸಹ ಬಹಳ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಾವು ಐದು ದಿನಗಳ ಕಾಲ ಪ್ಲ್ಯಾನ್‌ ಮಾಡಿಕೊಂಡಿದ್ದೇವೆ. ಇನ್ನೂ ನಾವು ವಾರಣಾಸಿಗೆ ಹೋಗಬೇಕು. ಅಯೋಧ್ಯೆಯ ಬಾಲ ರಾಮನ ದರ್ಶನಕ್ಕೆ ಹೋಗಲು ಪ್ರಯತ್ನಿಸುತ್ತೇವೆ. ಇಂದು ಅಖಾಡಕ್ಕೆ ಹೋಗಿ ಸಾಧುಗಳ ಆಶೀರ್ವಾದ ಪಡೆಯಲು ತೆರಳುತ್ತಿದ್ದೇವೆ ಎಂದು ತಿಳಿಸಿದರು.

ಸಂಗಮದಲ್ಲಿ ಮಿಂದು.. ಕಣ್ಣುಗಳು ನೆಂದು ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು.. ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು. ಕೋಟಿ ಜನ ಸೇರೋ ಜಾಗ. ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗುತ್ತಿರಲಿಲ್ಲ ಎಂದು ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago