Featured

ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ : ಅನುಶ್ರೀ – vishwanews24

ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ : ಅನುಶ್ರೀ

ಪ್ರಯಾಗ್‌ರಾಜ್‌: ಮಹಾ ಕುಂಭಮೇಳಕ್ಕೆ  ತೆರಳಿರುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀಯವರು ತಮ್ಮ ದೈವಿಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಪುಣ್ಯ ನದಿಯಲ್ಲಿ ಮುಳುಗಿ ಏಳುವಾಗ ತುಂಬಾ ಭಾವುಕ ಅನುಭವವನ್ನು ನಾನು ಅನುಭವಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಆ ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ. ಒಂದು ಬಿಸಿ ವಸ್ತುವನ್ನು ಮುಟ್ಟಿದವರಿಗೆ ಹೇಗೆ ತಿಳಿಯುತ್ತದೆಯೋ ಈ ಅನುಭವ ಸಹ ಹಾಗೆಯೇ. ಆ ಅದ್ಭುತ ಅನುಭವವನ್ನು ಸುಧಾರಿಸಿಕೊಳ್ಳಲು ಸ್ವಲ್ಪ ಸಮಯಬೇಕು. ಹರಹರ ಮಹಾದೇವ ಎಂದು ತೆರಳುವಾಗ ಅಲ್ಲಿನ ದೀಪಾಲಂಕಾರಗಳಲ್ಲಿ ಶಿವನೇ ಆಶೀರ್ವಾದ ಮಾಡುವಂತೆ ಕಾಣುತ್ತದೆ. ನಾನಂತೂ ನೀರಿನಲ್ಲಿ ಮುಳುಗಿದಾಗೆಲ್ಲ ಕಣ್ಣೀರು ಹಾಕಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

144 ವರ್ಷಕ್ಕೆ ಒಮ್ಮೆ ಇದು ನಡೆಯೋದು, ಎಷ್ಟು ಜನರಿಗೆ ಈ ಅವಕಾಶ ಸಿಗುತ್ತೆ? ಎಲ್ಲಾ ಹೇಳ್ತಾರೆ ಇದು ಕಲಿಗಾಲ ಎಲ್ಲ ಪಾಪ ಮಾಡಿದವರು ಅಂತಾರೆ. ಆದರೆ ನನಗೆ ಅನ್ನಿಸಿದ್ದು, ಈ ಭಾಗ್ಯ ನಮಗೆ ಸಿಕ್ಕಿದೆ. ನಾವು ಪುಣ್ಯವಂತರು ಎಂದು ಹೇಳಿಕೊಂಡಿದ್ದಾರೆ.

ಇಲ್ಲಿ ಮಹಿಳೆಯರಿಗೆ ಸುರಕ್ಷತೆ ಇದೆ. ಇಂತಹ ವ್ಯವಸ್ಥೆ ಬಗ್ಗೆ ಹೆಮ್ಮೆ ಇದೆ. ಪೊಲೀಸ್‌ ಸಿಬ್ಬಂದಿ ಸಹ ಬಹಳ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಾವು ಐದು ದಿನಗಳ ಕಾಲ ಪ್ಲ್ಯಾನ್‌ ಮಾಡಿಕೊಂಡಿದ್ದೇವೆ. ಇನ್ನೂ ನಾವು ವಾರಣಾಸಿಗೆ ಹೋಗಬೇಕು. ಅಯೋಧ್ಯೆಯ ಬಾಲ ರಾಮನ ದರ್ಶನಕ್ಕೆ ಹೋಗಲು ಪ್ರಯತ್ನಿಸುತ್ತೇವೆ. ಇಂದು ಅಖಾಡಕ್ಕೆ ಹೋಗಿ ಸಾಧುಗಳ ಆಶೀರ್ವಾದ ಪಡೆಯಲು ತೆರಳುತ್ತಿದ್ದೇವೆ ಎಂದು ತಿಳಿಸಿದರು.

ಸಂಗಮದಲ್ಲಿ ಮಿಂದು.. ಕಣ್ಣುಗಳು ನೆಂದು ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು.. ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು. ಕೋಟಿ ಜನ ಸೇರೋ ಜಾಗ. ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗುತ್ತಿರಲಿಲ್ಲ ಎಂದು ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago