ಮಡಿಕೇರಿ:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ.
ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
ಚೆಟ್ಟಳ್ಳಿ ಪಂಚಾಯಿತಿಯ ಪೊನ್ನತ್ ಮೊಟ್ಟೆ ಎಂಬಲ್ಲಿ ಅಜಿಜ್ ಮತ್ತು ಫಾತಿಮಾ ದಂಪತಿಯ ಮನೆಯ ಹಿಂಬದಿಯ ಮಣ್ಣು ಕುಸಿದು ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ. ದಬಡ್ಕ ರಸ್ತೆ ಹಾಗೂ ಕೊಯನಾಡು ಸೇತುವೆಗಳೂ ಹಾನಿಯಾಗಿವೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…