ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.
ಬುಧವಾರ ಮುಂಜಾನೆ ಸುಮಾರು 1:30ರ ವೇಳೆಗೆ ಗಣೇಶ್, ರಾಯಲ್ ಹಾಗೂ ನಿತೇಶ್ ಫಲ್ಗುಣಿ ನದಿಗೆ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದೋಣಿ ಹಠಾತ್ತನೆ ನದಿಯಲ್ಲಿ ಮಗುಚಿ ಬಿದ್ದಿದೆ. ಈ ಸಮಯ ಈಜಲು ಬಾರದೆ ಗಣೇಶ್ ಹಾಗೂ ರಾಯಲ್ ನೀರುಪಾಲಾಗಿದ್ದು, ನಿತೇಶ್ ಈಜಿ ದಡ ಸೇರಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ತೀವ್ರ ಶೋಧ ಕಾರ್ಯ ನಡೆಸಿದ್ದು ಈ ವೇಳೆ ಗಣೇಶ್ ಎಂಬಾತನ ಮೃತದೇಹ ಪತ್ತೆಯಾಗಿದೆ.ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…