ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿ ಕಿಡಿ ಕಾರಿದ್ದಾರೆ.
ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ ಕಿತ್ತೋಗುತ್ತಾನೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ಕಿಡಿ ಕಾರಿದ್ದಾರೆ.
ಅವನು ತಿಳಿದುಕೊಳ್ಳಬೇಕು ಅವನು ಒನ್ ಮ್ಯಾನ್ ಆರ್ಮಿ ಎಂದು .ಜೆಡಿಎಸ್ 36 , ಕಾಂಗ್ರೆಸ್ 80 ಸ್ಥಾನ ಹೊಂದಿದೆ. ಕಾಂಗ್ರೆಸ್ ಮನಸ್ಸು ಮಾಡಿದರೆ ಎನ್.ಮಹೇಶ್ ಹೋಗ್ತಾನೆ. ಈಗ ತಾನೇ ಕಣ್ಬಿಟ್ಟು ಎಲ್ಲವನ್ನೂ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಕಳೆಯನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ ವಿರುದ್ದ ಪುಟ್ಟರಂಗ ಶೆಟ್ಟಿ ಈ ಪರಿಯಲ್ಲಿ ಕಿಡಿ ಕಾರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…