ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿ ಕಿಡಿ ಕಾರಿದ್ದಾರೆ.
ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ ಕಿತ್ತೋಗುತ್ತಾನೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ಕಿಡಿ ಕಾರಿದ್ದಾರೆ.
ಅವನು ತಿಳಿದುಕೊಳ್ಳಬೇಕು ಅವನು ಒನ್ ಮ್ಯಾನ್ ಆರ್ಮಿ ಎಂದು .ಜೆಡಿಎಸ್ 36 , ಕಾಂಗ್ರೆಸ್ 80 ಸ್ಥಾನ ಹೊಂದಿದೆ. ಕಾಂಗ್ರೆಸ್ ಮನಸ್ಸು ಮಾಡಿದರೆ ಎನ್.ಮಹೇಶ್ ಹೋಗ್ತಾನೆ. ಈಗ ತಾನೇ ಕಣ್ಬಿಟ್ಟು ಎಲ್ಲವನ್ನೂ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಕಳೆಯನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ ವಿರುದ್ದ ಪುಟ್ಟರಂಗ ಶೆಟ್ಟಿ ಈ ಪರಿಯಲ್ಲಿ ಕಿಡಿ ಕಾರಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…