ಬೆಂಗಳೂರು: ದೋಸ್ತಿ ಸರ್ಕಾರದ ಮತ್ತೆರೆಡು ವಿಕೆಟ್ ಪತನವಾಗಿದೆ. ಶಾಸಕ ಸುಧಾಕರ್ ಮತ್ತು ಸಚಿವ ಎಂಟಿಬಿ ನಾಗರಾಜ್ ವಿಧಾನಸೌಧದ ಸ್ಪೀಕರ್ ಕಚೇರಿಗೆ ಆಗಮಿಸಿ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಎಂಟಿಬಿ ನಾಗರಾಜ್ ಮತ್ತು ಶಾಸಕ ಸುಧಾಕರ್ ರಾಜೀನಾಮೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿ ದೆ. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆಯೊಳಗೆ ಇನ್ನಿಬ್ಬರು ರಾಜೀನಾಮೆ ನೀಡ್ತಾರೆ ಎಂದು ಮುನ್ಸೂಚನೆ ನೀಡಿದ್ದರು.
ಶಾಸಕರಾದ ಸುಧಾಕರ್ ಹಾಗೂ ನಾಗರಾಜ್ ಅವರು ತಮ್ಮ ಕೈಬರಹದಲ್ಲಿ ರಾಜೀನಾಮೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಲ್ಲಿಸಿದ್ದು ಈ ವೇಳೆ ಇವರಿಬ್ಬರು ” ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ಎಂಟಿಬಿ ನಾಗರಾಜ್, ಜೆಡಿಎಸ್ ನವರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡುತ್ತಿಲ್ಲ. ಅವರಿಗೆ ಇಷ್ಟ ಬಂದಂತೆ ವರ್ಗಾವಣೆ ಮಾಡುತ್ತಿದ್ದಾರೆ. ಹೀಗಾಗಿ ಸಿಎಂ ಅವರ ಆಡಳಿತದಿಂದ ಬೇಸತ್ತು ಅತೃಪ್ತರು ಪಕ್ಷದಿಂದ ಹೊರ ಹೋಗಿದ್ದಾರೆ. ಸಿಎಂ ಹೇಳೋದು ಒಂದು, ಮಾಡೋದು ಇನ್ನೊಂದು. ರೇವಣ್ಣ ಅವರ ಮಾತು ಕೇಳಿಯೇ ಸಿಎಂ ಕೆಟ್ಟರು. ಮೈತ್ರಿ ಸರ್ಕಾರದಲ್ಲಿನ ಜೆಡಿಎಸ್ನವರ ಸರ್ವಾಧಿಕಾರಿ ಧೋರಣೆಯೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…