ದ್ರಾವಿಡ್ ಭಾರತೀಯ ಕ್ರಿಕೆಟ್ನ ಶ್ರೇಷ್ಠರು ಮತ್ತು ಅವರೊಂದಿಗೆ ಕೆಲಸ ಮಾಡುವುದು ಅತ್ಯಂತ ಸಂತೋಷದ ವಿಚಾರ : ರೋಹಿತ್ ಶರ್ಮಾ -Vishwanews24
ಅಬುಧಾಬಿ: ರಾಹುಲ್ ದ್ರಾವಿಡ್ ಅವರನ್ನು ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ನೇಮಕ ಮಾಡಿರುವುದನ್ನು ಉಪನಾಯಕ ರೋಹಿತ್ ಶರ್ಮಾ ಸ್ವಾಗತಿಸಿದ್ದಾರೆ. ಆಟಗಾರರು ಬ್ಯಾಟಿಂಗ್ ಶ್ರೇಷ್ಠರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.
‘ನಾವು (ಅಫ್ಘಾನಿಸ್ತಾನದ ವಿರುದ್ಧ) ಪಂದ್ಯದಲ್ಲಿ ನಿರತರಾಗಿದ್ದೆವು. ಹಾಗಾಗಿ, ದ್ರಾವಿಡ್ ನೇಮಕದ ಬಗ್ಗೆ ತಿಳಿದಿರಲಿಲ್ಲ. ಭಾರತ ತಂಡಕ್ಕೆ ವಿಭಿನ್ನ ಸಾಮರ್ಥ್ಯದ ಮೂಲಕ ಮರಳಿ ಬಂದಿದ್ದಕ್ಕಾಗಿ ಅವರಿಗೆ (ರಾಹುಲ್ ದ್ರಾವಿಡ್) ಅಭಿನಂದನೆಗಳು. ನಾವು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಎಂದು ಪಂದ್ಯದ ಬಳಿಕ ರೋಹಿತ್ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಮಾಜಿ ಬಲಗೈ ಬ್ಯಾಟ್ಸ್ಮನ್ ದ್ರಾವಿಡ್ ಅವರನ್ನು, 2023ರ 50 ಓವರ್ಗಳ ವಿಶ್ವಕಪ್ವರೆಗೆ ಎರಡು ವರ್ಷಗಳ ಅವಧಿಗೆ ಹೆಡ್ ಕೋಚ್ ಆಗಿ ನೇಮಕ ಮಾಡಲಾಗಿದೆ.
ನವೆಂಬರ್ 17ರಿಂದ ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
‘ಅವರು (ದ್ರಾವಿಡ್) ಭಾರತೀಯ ಕ್ರಿಕೆಟ್ನ ಶ್ರೇಷ್ಠರು ಮತ್ತು ಅವರೊಂದಿಗೆ ಕೆಲಸ ಮಾಡುವುದು ಅತ್ಯಂತ ಸಂತೋಷದ ವಿಚಾರ’ಎಂದು ರೋಹಿತ್ ಹೇಳಿದರು.
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…