ಉಡುಪಿ: ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಮತ್ತು ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ.
ಮಹಿಳಾ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ ಹೆಚ್, ಹಜ್ರಾ ಶಿಫಾ, ಅಲಿಯಾ ಅಸಾದಿ, ಅಲಿಯಾ ಬಾನು ಮತ್ತು ರೇಷಂ ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಪ್ರತಿಭಟಿಸಿದ್ದರು. ಆರು ಮಂದಿ ಹಿಜಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಹಾಗೂ ಇನ್ನುಳಿದ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ.
ಇಂದು ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದ ಪರೀಕ್ಷೆ ನಡೆದಿದ್ದು, ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇತ್ತು. ಇಂದು ಅಲಿಯಾ ಅಸಾದಿ ಮತ್ತು ರೇಷಂ ಪರೀಕ್ಷೆ ಇತ್ತು.ಇಂದು ಬೆಳಗ್ಗೆ ಕೊನೆ ಕ್ಷಣದಲ್ಲಿ ಕಾಲೇಜಿಗೆ ಆಗಮಿಸಿದ ಆಲಿಯಾ, ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ.
ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದಾರೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಆಲಿಯಾ, ರೇಷಂ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…