ಉಡುಪಿ: ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಮತ್ತು ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ.
ಮಹಿಳಾ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ ಹೆಚ್, ಹಜ್ರಾ ಶಿಫಾ, ಅಲಿಯಾ ಅಸಾದಿ, ಅಲಿಯಾ ಬಾನು ಮತ್ತು ರೇಷಂ ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಪ್ರತಿಭಟಿಸಿದ್ದರು. ಆರು ಮಂದಿ ಹಿಜಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಹಾಗೂ ಇನ್ನುಳಿದ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ.
ಇಂದು ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದ ಪರೀಕ್ಷೆ ನಡೆದಿದ್ದು, ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇತ್ತು. ಇಂದು ಅಲಿಯಾ ಅಸಾದಿ ಮತ್ತು ರೇಷಂ ಪರೀಕ್ಷೆ ಇತ್ತು.ಇಂದು ಬೆಳಗ್ಗೆ ಕೊನೆ ಕ್ಷಣದಲ್ಲಿ ಕಾಲೇಜಿಗೆ ಆಗಮಿಸಿದ ಆಲಿಯಾ, ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ.
ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದಾರೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಆಲಿಯಾ, ರೇಷಂ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…