Featured

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ

ಬೆಂಗಳೂರು: 2025-26ನೇ ಸಾಲಿನ ದ್ವೀತಿಯ ಪಿಯು ಪರೀಕ್ಷೆಯಲ್ಲಿ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದ.ಕ ಜಿಲ್ಲೆ ದ್ವೀತಿಯ ಸ್ಥಾನ ಪಡೆದಿದೆ.

ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿ ಮೂಡುಬಿದಿರೆಯ ದಿಶಾ ಕಾಮರ್ಸ್ ವಿಭಾಗದಲ್ಲಿ ಶೇಖಡಾ 100ಅಂಕ ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಅಧಿಕೃತ ವೆಬ್‌ಸೈಟ್‌ ನಲ್ಲಿ ಸರ್ವರ್ ಸಮಸ್ಯೆ ಉಂಟಾದರೆ, ಫಲಿತಾಂಶ ನೋಡಲು ಅದಕ್ಕಿಂತ ಸುಲಭವಾಗಿ ಬದಲೀ ಮಾರ್ಗವಿದೆ. ಈಗಾಗಲೇ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿ ಈಗಾಗಲೇ ಡಿಜಿಟಲ್ ರೂಪದಲ್ಲಿ ಲಭ್ಯವಾಗಲು ಸಿದ್ಧವಾಗಿದೆ. ಮೊಬೈಲ್‌ನಲ್ಲಿ ಸಂಪೂರ್ಣ ಫಲಿತಾಂಶವನ್ನು ನೋಡುವ ಸುಲಭ ವಿಧಾನವಿದೆ.

ಕೇಂದ್ರ ಸರ್ಕಾರದ ಡಿಜಿಲಾಕರ್ ಸೌಲಭ್ಯ ಬಳಸಿ, ಫಲಿತಾಂಶ ಪ್ರಕಟವಾದ ಕೂಡಲೇ ನಿಮ್ಮ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಡಿಜಿಟಲ್ ಅಂಕಪಟ್ಟಿಗೆ ಅಧಿಕೃತ ಮಾನ್ಯತೆಯೂ ಇದೆ.

ಅಂಕಪಟ್ಟಿ ಪಡೆಯುವ ಹಂತಗಳು:

ನಿಮ್ಮ ಫೋನ್‌ನಲ್ಲಿ DigiLocker ಆಪ್ ಡೌನ್‌ಲೋಡ್ ಮಾಡಿ ಅಥವಾ ವೆಬ್‌ಸೈಟ್ ತೆರೆಯಿರಿ

“Education and Learning” ವಿಭಾಗವನ್ನು ಆಯ್ಕೆ ಮಾಡಿ

“KSEAB” ಅನ್ನು ಹುಡುಕಿ ಕ್ಲಿಕ್ ಮಾಡಿ

“2nd PUC Marksheet” ಆಯ್ಕೆಮಾಡಿ

ನಿಮ್ಮ ನೋಂದಣಿ ಸಂಖ್ಯೆ ಮತ್ತು ವರ್ಷ (2026) ನಮೂದಿಸಿ

ಸಬ್‌ಮಿಟ್ ಮಾಡಿದ ಬಳಿಕ ನಿಮ್ಮ ಫಲಿತಾಂಶ ಕಾಣಿಸುತ್ತದೆ.

ಅದನ್ನು PDF ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಈ ಡಿಜಿಟಲ್ ಅಂಕಪಟ್ಟಿಯಲ್ಲಿ QR ಕೋಡ್ ಹಾಗೂ ಡಿಜಿಟಲ್ ಸಹಿ ಇರುತ್ತದೆ. ಇದು ಮೂಲ ಅಂಕಪಟ್ಟಿಯಷ್ಟೇ ಮಾನ್ಯವಾಗಿದ್ದು, ಕಾಲೇಜು ಪ್ರವೇಶ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಬಳಸಬಹುದು. ವೆಬ್‌ಸೈಟ್ ಸಮಸ್ಯೆಗಳಿಲ್ಲದೆ ಸುಲಭವಾಗಿ ಫಲಿತಾಂಶ ನೋಡಲು ಇದು ಅತ್ಯುತ್ತಮ ಮತ್ತು ವಿಶ್ವಾಸಾರ್ಹ ಮಾರ್ಗವಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago