ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿಇದೀಗ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಮಯದಲ್ಲಿ 15 ನಿಮಿಷ ಕಡಿತ ಮಾಡಲಾಗಿದೆ.
ಹೊಸ ನಿಯಮ ಅನುಷ್ಠಾನದ ಬಗ್ಗೆ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಮೂರು ಗಂಟೆಗಳ ಕಾಲ ನಡೆಯುತ್ತಿದ್ದ ಲಿಖಿತ ಪರೀಕ್ಷೆ ಇನ್ನು ಮುಂದೆ 2 ಗಂಟೆ 45 ನಿಮಿಷಗಳ ಕಾಲ ನಡೆಯಲಿದೆ.
ಇದೇ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು 2.45 ಗಂಟೆಯಲ್ಲಿ ಉತ್ತರ ಬರೆಯಬೇಕಾಗಿದೆ.
ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಯಲ್ಲಿ ಮೂರು ಗಂಟೆ ಕಳೆಯಬೇಕಿದೆ. ಯಾಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬಳಿಕ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ.
ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…