ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿಇದೀಗ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಮಯದಲ್ಲಿ 15 ನಿಮಿಷ ಕಡಿತ ಮಾಡಲಾಗಿದೆ.
ಹೊಸ ನಿಯಮ ಅನುಷ್ಠಾನದ ಬಗ್ಗೆ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಮೂರು ಗಂಟೆಗಳ ಕಾಲ ನಡೆಯುತ್ತಿದ್ದ ಲಿಖಿತ ಪರೀಕ್ಷೆ ಇನ್ನು ಮುಂದೆ 2 ಗಂಟೆ 45 ನಿಮಿಷಗಳ ಕಾಲ ನಡೆಯಲಿದೆ.
ಇದೇ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು 2.45 ಗಂಟೆಯಲ್ಲಿ ಉತ್ತರ ಬರೆಯಬೇಕಾಗಿದೆ.
ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಯಲ್ಲಿ ಮೂರು ಗಂಟೆ ಕಳೆಯಬೇಕಿದೆ. ಯಾಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬಳಿಕ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ.
ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…