Featured

ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಪರೀಕ್ಷಾ ಅವಧಿ 15 ನಿಮಿಷ ಕಡಿತ – vishwanews24

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 15 ನಿಮಿಷ ಕಡಿತ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿಇದೀಗ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಮಯದಲ್ಲಿ 15 ನಿಮಿಷ ಕಡಿತ ಮಾಡಲಾಗಿದೆ.

ಹೊಸ ನಿಯಮ ಅನುಷ್ಠಾನದ ಬಗ್ಗೆ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಮೂರು ಗಂಟೆಗಳ ಕಾಲ ನಡೆಯುತ್ತಿದ್ದ ಲಿಖಿತ ಪರೀಕ್ಷೆ ಇನ್ನು ಮುಂದೆ 2 ಗಂಟೆ 45 ನಿಮಿಷಗಳ ಕಾಲ ನಡೆಯಲಿದೆ.

ಇದೇ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು 2.45 ಗಂಟೆಯಲ್ಲಿ ಉತ್ತರ ಬರೆಯಬೇಕಾಗಿದೆ.

ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಯಲ್ಲಿ ಮೂರು ಗಂಟೆ ಕಳೆಯಬೇಕಿದೆ. ಯಾಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬಳಿಕ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ.

ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

34 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

41 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

47 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago