Featured

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ – vishwanews24

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.

ಏಪ್ರಿಲ್‌ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ 3ನೇ ಸ್ಥಾನ(ಶೇ.85.36), ಕೊಡಗು 4ನೇ ಸ್ಥಾನ (ಶೇ.83.84), ಬೆಂಗಳೂರು ಉತ್ತರ 5ನೇ ಸ್ಥಾನ (ಶೇ.83.31), ಉತ್ತರ ಕನ್ನಡ (ಶೇ.82.93), ಶಿವಮೊಗ್ಗ (ಶೇ.79.91), ಬೆಂಗಳೂರು ಗ್ರಾಮಾಂತರ (ಶೇ.79.70), ಚಿಕ್ಕಮಗಳೂರು (ಶೇ.79.56), ಹಾಸನ (ಶೇ.77.56), ಚಿಕ್ಕಬಳ್ಳಾಪುರ (ಶೇ.75.80), ಮೈಸೂರು (ಶೇ.74.30), ಚಾಮರಾಜನಗರ (ಶೇ.73.97), ಮಂಡ್ಯ (ಶೇ.72.27), ಬಾಗಲಕೋಟೆ (72.83), ಕೋಲಾರ (ಶೇ.72.45), ಧಾರವಾಡ (ಶೇ.72.32), ತುಮಕೂರು (ಶೇ.72.02), ರಾಮನಗರ (ಶೇ.69.71).

Vishwa News 24

Recent Posts

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

10 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

22 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago