Featured

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ – vishwanews24

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.

ಏಪ್ರಿಲ್‌ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ 3ನೇ ಸ್ಥಾನ(ಶೇ.85.36), ಕೊಡಗು 4ನೇ ಸ್ಥಾನ (ಶೇ.83.84), ಬೆಂಗಳೂರು ಉತ್ತರ 5ನೇ ಸ್ಥಾನ (ಶೇ.83.31), ಉತ್ತರ ಕನ್ನಡ (ಶೇ.82.93), ಶಿವಮೊಗ್ಗ (ಶೇ.79.91), ಬೆಂಗಳೂರು ಗ್ರಾಮಾಂತರ (ಶೇ.79.70), ಚಿಕ್ಕಮಗಳೂರು (ಶೇ.79.56), ಹಾಸನ (ಶೇ.77.56), ಚಿಕ್ಕಬಳ್ಳಾಪುರ (ಶೇ.75.80), ಮೈಸೂರು (ಶೇ.74.30), ಚಾಮರಾಜನಗರ (ಶೇ.73.97), ಮಂಡ್ಯ (ಶೇ.72.27), ಬಾಗಲಕೋಟೆ (72.83), ಕೋಲಾರ (ಶೇ.72.45), ಧಾರವಾಡ (ಶೇ.72.32), ತುಮಕೂರು (ಶೇ.72.02), ರಾಮನಗರ (ಶೇ.69.71).

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago