Featured

ದ್ವಿಪತ್ನಿತ್ವ ಪದ ಬಳಕೆ: ನನ್ನ ಜೀವನ ತೆರೆದ ಪುಸ್ತಕವಿದ್ದಂತೆ, ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ : ಬಿಜೆಪಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ – Vishwanews24

ದ್ವಿಪತ್ನಿತ್ವ ಪದ ಬಳಕೆ: ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ : ಬಿಜೆಪಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ – Vishwanews24

ವಿಜಯಪುರ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ, ಆರೋಪ-ಪ್ರತ್ಯಾರೋಪ ತಾರಕಕ್ಕೇರುತ್ತಿದೆ. ರಾಜಕೀಯ ನಾಯಕರು ಟೀಕಿಸುವ ಭರದಲ್ಲಿ ವೈಯಕ್ತಿಕ  ದಾಳಿಗೆ ಇಳಿದಿದ್ದಾರೆ.

ಅದರಲ್ಲೂ ಬಿಜೆಪಿ ಬೈಗಮಿ (ದ್ವಿಪತ್ನಿತ್ವ) ಎನ್ನುವ ಪದ ಬಳಕೆ ಮಾಡಿದೆ. ಇದಕ್ಕೆ ಇದೀಗ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಬಿಜೆಪಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ವಿಜಯಪುರದ ಸಿಂದಗಿಯಲ್ಲಿ ಇಂದು (ಅ.20) ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಬಿಜೆಪಿಯ ಒಬ್ಬೊಬ್ಬ ನಾಯಕರಿಗೂ ಒಂದೊಂದು ಇತಿಹಾಸವಿದೆ. ಅದನ್ನ ನನ್ನ ಬಾಯಲ್ಲಿ ಹೇಳೋಕೆ ಆಗಲ್ಲ. ಅವರ ಬಂಡವಾಳ ಬಿಚ್ಚಿದ್ರೆ ಚರ್ಚೆ ಮಾಡೋಕೆ ಆಗಲ್ಲ. ಅವರ ಈ ಪದಗಳ ಬಳಕೆಗೆ ನಾನು ಹತ್ತರಷ್ಟು ಕೆಸರೆರಚಬಲ್ಲೆ. ಅವರು ಜವಾಬ್ದಾರಿ ಅರಿತು ನಡೆದುಕೊಳ್ಳಲಿ ಎಂದು ಎಚ್ಚರಿಕೆ ನೀಡಿದರು.

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತೆ. ನಮ್ಮ ಪಕ್ಷದ ಇತ್ತೀಚಿನ ಏಳಿಗೆಯನ್ನ ಸಹಿಸದೇ ಬಿಜೆಪಿಯವ್ರು ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. ನನ್ನನ್ನು ಡಿಸ್ಟರ್ಬ್​ ಮಾಡೋಕೆ ಅಂತಾನೇ ಈ ರೀತಿ ಮಾಡಿದ್ದಾರೆ. ಆದರೆ ಇವರ ಈ ಹೇಳಿಕೆಗಳಿಂದ ನಾನೇನು ವಿಚಲಿತನಾಗೋದಿಲ್ಲ ಎಂದರು.

ಕುಮಾರಸ್ವಾಮಿ ಆರ್‌ಎಸ್‌ಎಸ್‌  ಹಾಗೂ ಮುಸ್ಲಿಂರ   ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ಮಾಡಿದ್ದು, ಸ್ವಜನ ಪಕ್ಷಪಾತ ಇವೆಲ್ಲ ತಪ್ಪುಗಳನ್ನು ಮಾಡಿರುವ ನೀವು ಎಲ್ಲಕ್ಕಿಂತ ಮುಖ್ಯವಾಗಿ  ಬೈಗಮಿ(ದ್ವಿಪತ್ನಿತ್ವ)ಯಲ್ಲವೇ ಎಂದು ಪ್ರಶ್ನೆ ಮಾಡಿ ಟೀಕಿಸಿತ್ತು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

15 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

15 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

16 hours ago