ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡುವ ಮುನ್ನ ಬುಧವಾರ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆಯ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದ್ವೇಷದ ರಾಜಕಾರಣದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ, ಆದರೆ ದೇಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.
ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ತಮಿಳು ನಾಡಿನ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸುವುದಕ್ಕೆ ಮುನ್ನ ಶ್ರೀಪೆರಂಬದೂರಿನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ನಾನು ನನ್ನ ತಂದೆಯನ್ನು ರಾಜಕೀಯ ದ್ವೇಷ ಮತ್ತು ವಿಭಜನೆಗಾಗಿ ಕಳೆದುಕೊಂಡೆ. ಹಾಗೆಂದು ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ಸಿದ್ಧನಿಲ್ಲ. ಪ್ರೀತಿ ದ್ವೇಷವನ್ನು ಗೆಲ್ಲುತ್ತದೆ. ಆಶಾವಾದ ಭಯವನ್ನು ಸೋಲಿಸುತ್ತದೆ. ನಾವೆಲ್ಲರೂ ಒಟ್ಟಾಗಿ ಜಯಸೋಣ, ಎಲ್ಲ ಸಮಸ್ಯೆಗಳಿಂದ ಹೊರಬರೋಣ ಎಂದು ತಮ್ಮ ತಂದೆಗೆ ನಮನ ಸಲ್ಲಿಸಿದ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.
ಮೇ 21, 1991 ರಂದು ಶ್ರೀಪೆರಂಬದೂರಿನಲ್ಲಿ ಹತ್ಯೆಗೀಡಾದ ತಮ್ಮ ತಂದೆ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ಬಳಿಕ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಕನ್ಯಾಕುಮಾರಿಗೆ ರಾಹುಲ್ ಆಗಮಿಸಿದ್ದಾರೆ. ಮಹಾತ್ಮ ಗಾಂಧಿ ಮಂಟಪದಲ್ಲಿ ಪ್ರಾರ್ಥನಾ ಸಭೆ ಮತ್ತು ಗಾಂಧಿ ಮಂಟಪದಲ್ಲಿ ರಾಷ್ಟ್ರಧ್ವಜ ಹಸ್ತಾಂತರ ಸಮಾರಂಭ ನಡೆಯಲಿದ್ದು, ಬಳಿಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರಿಗಳೊಂದಿಗೆ ಮೆರವಣಿಗೆ ನಡೆಸಲಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…