ಬೆಂಗಳೂರು: ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಇದು ಮಹತ್ವದ ದಿನವಾಗಿದೆ. ಆದರೆ, ಇಂದು ನಕಲಿ ದೇಶಭಕ್ತರು ಕಾಂಗ್ರೆಸ್ ಹಾಗೂ ಭಾರತೀಯರಿಗೆ ದೇಶಭಕ್ತಿಯ ಪಾಠ ಮಾಡುತ್ತದೆ. ಆರ್ ಎಸ್ ಎಸ್ ನಾಯಕರು ಈ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು.
ಆರ್ ಎಸ್ ಎಸ್ ಸ್ಥಾಪಕ ಹೆಡ್ಗೆವಾರ್ ಹಾಗೂ ಗೋಲ್ವಳ್ಕರ್ ಈ ಹೋರಾಟದಲ್ಲಿ ಇರಲಿಲ್ಲ. ಶಾಮ್ ಪ್ರಸಾದ್ ಮುಖರ್ಜಿ ಕ್ವಿಟ್ ಇಂಡಿಯಾ ಹೋರಾಟ ಯಶಸ್ವಿ ಆಗಲು ಬಿಡದಂತೆ ಬ್ರಿಟಿಷರಿಗೆ ಪತ್ರವನ್ನು ಬರೆದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ಇದ್ದದ್ದು ಕಾಂಗ್ರೆಸ್ ಪಕ್ಷದ್ದು ಮಾತ್ರ ಎಂದು ಹೇಳಿದರು.
ಬೈಂದೂರು: ಬಾಲಕಿ ನೀರುಪಾಲು : ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ..
ಮೋದಿ ಭಕ್ತರು 2014 ಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಪರೋಕ್ಷವಾಗಿ ಹೇಳುತ್ತಾರೆ. ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸದವರು ನಮಗೆ ತಿರಂಗದ ಪಾಠ ಮಾಡುತ್ತಾರೆ ಎಂದು ಕಿಡಿಕಾರಿದರು. ಸ್ವಾತಂತ್ರ್ಯಕ್ಕೆ, ಸಂವಿಧಾನಕ್ಕೆ ಬಿಜೆಪಿಯಿಂದ ಯಾವುದೇ ಕೊಡುಗೆ ಇಲ್ಲ. ಈ ನಿಟ್ಟಿನಲ್ಲಿ ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಕೆ.ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…