ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ದ್ವೇಷ ಭಾಷಣದ ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು. ಆದರೆ ಹತ್ತು ವರ್ಷದ ಶಿಕ್ಷೆ ಕಾನೂನು ತಂದು ಸರ್ಕಾರದ ವಿರುದ್ಧ, ಅವರ ಪಕ್ಷದ ವಿರುದ್ಧ ಮಾತನಾಡುವವರಿಗೆ ನಾನು ಬೇಲೆಬಲ್ ವಾರೆಂಟ್ ತಂದು ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿ ಇದೆ. ಇದು ಪ್ರಜಾಪ್ರಭುತ್ವ ವಿರುದ್ಧ ಎಂದು ಆರೋಪಿಸಿದ್ದಾರೆ.
ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಅಂತ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಎಲ್ಲ ರಂಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ದೀನ ದಲಿತರ ಹಣವನ್ನು ಲಪಟಾಯಿಸಿರುವ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅದರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ, ಅವರ ಧ್ವನಿಯನ್ನು ದಮನ ಮಾಡುವ ದಮನಕಾರಿ ಕಾನೂನು ತಂದಿದ್ದಾರೆ. ಇದು ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರ ರಾಜಕಾರಣಕ್ಕೆ ಕಪ್ಪು ಚುಕ್ಕೆ. ವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅವರು ಅದರ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ, ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…