Featured

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್ – vishwanews24

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಬೆಂಗಳೂರು: ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಆದರೆ ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದ ಕಾರಣ ಇನ್ನೂ ರಾಜ್ಯಪಾಲರ ಪರಿಶೀಲನೆಯಲ್ಲಿದೆ.

ಎರಡು ಮಸೂದೆಗಳಾದ ಕರ್ನಾಟಕ ಪರಿಶಿಷ್ಟ ಜಾತಿ(SC ಒಳ ಮೀಸಲಾತಿ) ಮಸೂದೆ ಮತ್ತು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳನ್ನು ಹೆಚ್ಚಿನ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ ಎಂದು ಲೋಕಭವನ ತಿಳಿಸಿದೆ.

ಇವುಗಳ ಹೊರತಾಗಿ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ಮಸೂದೆಯು ರಾಜ್ಯಪಾಲರ ಪರಿಗಣನೆಯಲ್ಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

22 ಮಸೂದೆಗಳಲ್ಲಿ 19 ಮಸೂದೆಗಳನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲು ಕಳುಹಿಸಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ಮಸೂದೆಗೆ ತೀವ್ರ ವಿರೋಧ ವ್ಯಕ್ತಿಪಡಿಸಿದ್ದ ಪ್ರತಿಪಕ್ಷ ಬಿಜೆಪಿ, ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಮನವಿ ಮಾಡಿತ್ತು.

ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಸೂದೆಯು 1 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲು ಅವಕಾಶ ನೀಡುತ್ತದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago