ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಮಸೂದೆಯನ್ನು ಶ್ರೀರಾಮಸೇನೆ ಉಗ್ರವಾಗಿ ಖಂಡಿಸುತ್ತದೆ. ಸರಕಾರ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ, ಮುಸ್ಲಿಮರ ಓಟ್ ಗಾಗಿ ಈ ಮಸೂದೆ ಜಾರಿಗೆ ತರಲು ಹೊರಟಿದೆ. ಗೋಹತ್ಯೆ ನಿಷೇಧ ಜಾರಿಯಲ್ಲಿದ್ದಾಗಲೂ ಹಲವೆಡೆ ಗೋಹತ್ಯೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಗೋಹತ್ಯೆ ವಿರುದ್ಧ ಮಾತನಾಡುವುದು ತಪ್ಪೇ?, ಲವ್ ಜಿಹಾದ್, ಪ್ರೀತಿ, ಪ್ರೇಮದ ಹೆಸರಲ್ಲಿ ಮತಾಂತರ ನಡೆದಾಗ ತಡೆಯುವುದು ತಪ್ಪೇ? ಈ ಕುರಿತು ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ತಪ್ಪೇ? ಹಲವೆಡೆ ಅನಧಿಕೃತವಾಗಿ ಚರ್ಚ್, ಮಸೀದಿ ಸ್ಥಾಪನೆ, ಸ್ಮಶಾನ ಜಾಗ ಕಬಳಿಗೆ ನಡೆದಾಗ ವಿರೋಧಿಸುವುದು ತಪ್ಪೇ? ಎಂದು ಪ್ರಶ್ನಿಸಿದರು.
ಪ್ರಶ್ನಿಸುವ, ವಿರೋಧಿಸುವ ಧೈರ್ಯವನ್ನು ಸರಕಾರ ಹತ್ತಿಕ್ಕಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡುವ ಹುನ್ನಾರ ನಡೆಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಹರಣಗೈದಿದೆ. ಆದ್ದರಿಂದ ಈ ಕೂಡಲೇ ರಾಜ್ಯದ ಬಿಜೆಪಿ, ಜೆಡಿಎಸ್ ಶಾಸಕರು ಸಂಪುಟ ಸಭೆಯಲ್ಲಿ ಈ ಮಸೂದೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುವ ಮೂಲಕ ಈ ಮಸೂದೆ ಜಾರಿಯಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಎಲ್ಲ ಶಾಸಕರಿಗೆ ಒತ್ತಾಯಿಸಿ ಸಂಘಟನೆಯಿಂದ ಮನವಿ ಸಲ್ಲಿಸಿ ಒತ್ತಡ ಹೇರಲಾಗುವುದು ಎಂದು ಮುತಾಲಿಕ್ ಹೇಳಿದರು.
ಇದೇ ಸಂದರ್ಭ ಮುತಾಲಿಕ್ ಕಾಯ್ದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ಪ್ರಮುಖರಾದ ಪರಶುರಾಮ್ ನಡುವಿನಮನಿ, ಯಶವಂತ್, ಶ್ರೀಧರ್, ಮಧು ಇತರರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…