ಮಂಜನಾಡಿ: ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯೊಂದು ಸಂಪೂರ್ಣ ಕುಸಿದು ಓರ್ವ ಮಹಿಳೆ ಮೃತಪಟ್ಟು , ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಓರ್ವ ಮಹಿಳೆ ಹಾಗೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಮೃತಪಟ್ಟ ಮಹಿಳೆಯನ್ನು ಪ್ರೇಮ(58) ಎಂದು ಗುರುತಿಸಲಾಗಿದೆ. ಅವರ ಪತಿ ಕಾಂತಪ್ಪ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂತಪ್ಪ ಪೂಜಾರಿ ಅವರ ಪುತ್ರ ಸೀತಾರಾಮ ಅವರು ಅದೃಷ್ಟವಶಾತ್ ಪಾರಾಗಿದ್ದಾರೆ. ಗುಡ್ಡ ಕುಸಿದು ಮನೆಯ ಒಂದು ಭಾಗದಲ್ಲಿ ಮಲಗಿದ್ದ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಇಬ್ಬರು ಪುಟ್ಟ ಮಕ್ಕಳು( 3 ಹಾಗೂ 2 ವರ್ಷದ ಮಕ್ಕಳು) ಕುಸಿದ ಮನೆಯೊಳಗೆ ಸಿಲುಕಿಕೊಂಡಿದ್ದಾರೆ.
ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಮನೆಯು ಸಂಪೂರ್ಣ ಕುಸಿದ ಪರಿಣಾಮ ರಕ್ಷಣಾ ಕಾರ್ಯ ಕಷ್ಟವಾಗಿತ್ತು. ಬಳಿಕ ಸ್ಥಳಕ್ಕೆ ಎನ್ ಡಿ ಆರ್ ಎಫ್, ಎಸ್ ಡಿಆರ್ ಪಿ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ರಕ್ಷಣಾ ಕಾರ್ಯ ಮುಂದುವರಿಸಿದ್ದು ತಾಯಿ ಹಾಗೂ ಇಬ್ಬರು ಮಕ್ಕಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಮನೆಯೊಳಗೆ ಸಿಲುಕಿರುವ ಮಹಿಳೆಯು ಕೊಂಚ ಮಾತಾಡುತ್ತಿದ್ದು, ಒಂದು ಮಗು ಅಳುವ ಶಬ್ದ ಕೇಳುತಿದ್ದು. ರಕ್ಷಣಾ ಕಾರ್ಯಕ್ಕೆ ಎಲ್ಲರೂ ಸಹಕರಿಸುತಿದ್ದು, ಮಳೆಯಿಂದಾಗಿ ಅಡ್ಡಿಯಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…